
ತುರಾ (ಮೇಘಾಲಯ) – ಮೇಘಾಲಯ ಮುಖ್ಯಮಂತ್ರಿ ಕೊನರಾಡ ಸಂಗಮಾ ಇವರ ಕಚೇರಿಯ ಮೇಲೆ ಗುಂಪೊಂದು ನಡೆಸಿದ ದಾಳಿಯಲ್ಲಿ 5 ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಇಲ್ಲಿ ಈಗ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ. ದಾಳಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಂಗಮಾ ನಿಯೋಗದೊಂದಿಗೆ ಚರ್ಚಿಸುತ್ತಿದ್ದರು. ಚರ್ಚೆ ಮುಗಿದಾಗ ಕಾರ್ಯಾಲಯದ ಹೊರಗೆ ಅಕಸ್ಮಿಕವಾಗಿ ಗುಂಪೊಂದು ಬಂದು, ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಈ ಗುಂಪು ಮುಖ್ಯಮಂತ್ರಿ ಕಚೇರಿಯ ಪ್ರವೇಶದ್ವಾರವನ್ನು ಮುರಿಯಲು ಪ್ರಯತ್ನಿಸಿತು.
(ಸೌಜನ್ಯ – Zee News English)
ಮುಖ್ಯಮಂತ್ರಿ ಸಂಗಮಾ ಇವರು ಮಾತನಾಡುತ್ತಾ, ಕಚೇರಿಯ ಮೇಲೆ ನಡೆದ ದಾಳಿ ಅತ್ಯಂತ ದುರದೃಷ್ಟಕರವಾಗಿದೆ. ನಾವು `ಅಚಿಕ್ ಕಾನ್ಷಿಯಸ್ ಹೊಲಿಸ್ಟಿಕಲಿ ಇಂಟಿಗ್ರೇಟೆಡ್ ಕ್ರಿಮಾ’ ಮತ್ತು `ಗಾರೊ ಹಿಲ್ಸ ಸ್ಟೇಟ ಮೂವಮೆಂಟ್ ಕಮಿಟಿ’ ಪ್ರತಿನಿಧಿಗಳೊಂದಿಗೆ ಚರ್ಚಿಸುತ್ತಿದ್ದೇವೆ. ಅವರ ಕೆಲವು ಬೇಡಿಕೆಗಳಿವೆ. ದಾಳಿ ನಡೆಸಿದವರು ಯಾರು ಎಂಬುದು ಈ ಸಂಘಟನೆಗಳ ಪ್ರತಿನಿಧಿಗಳಿಗೂಗೊತ್ತಿಲ್ಲ. ಅವರು ಹೊರಗಿನವರಾಗಿದ್ದರು. ಅವರನ್ನು ಹುಡುಕಲಾಗುತ್ತಿದೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಮುಖ್ಯಮಂತ್ರಿ ಕಚೇರಿಯೇ ಸುರಕ್ಷಿತವಾಗಿಲ್ಲದಿದ್ದಲ್ಲಿ ಸಾರ್ವಜನಿಕರು ಹೇಗೆ ಸುರಕ್ಷಿತವಾಗಿರುವರು ? |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ