
ತುರಾ (ಮೇಘಾಲಯ) – ಮೇಘಾಲಯ ಮುಖ್ಯಮಂತ್ರಿ ಕೊನರಾಡ ಸಂಗಮಾ ಇವರ ಕಚೇರಿಯ ಮೇಲೆ ಗುಂಪೊಂದು ನಡೆಸಿದ ದಾಳಿಯಲ್ಲಿ 5 ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಇಲ್ಲಿ ಈಗ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ. ದಾಳಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಂಗಮಾ ನಿಯೋಗದೊಂದಿಗೆ ಚರ್ಚಿಸುತ್ತಿದ್ದರು. ಚರ್ಚೆ ಮುಗಿದಾಗ ಕಾರ್ಯಾಲಯದ ಹೊರಗೆ ಅಕಸ್ಮಿಕವಾಗಿ ಗುಂಪೊಂದು ಬಂದು, ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಈ ಗುಂಪು ಮುಖ್ಯಮಂತ್ರಿ ಕಚೇರಿಯ ಪ್ರವೇಶದ್ವಾರವನ್ನು ಮುರಿಯಲು ಪ್ರಯತ್ನಿಸಿತು.
(ಸೌಜನ್ಯ – Zee News English)
ಮುಖ್ಯಮಂತ್ರಿ ಸಂಗಮಾ ಇವರು ಮಾತನಾಡುತ್ತಾ, ಕಚೇರಿಯ ಮೇಲೆ ನಡೆದ ದಾಳಿ ಅತ್ಯಂತ ದುರದೃಷ್ಟಕರವಾಗಿದೆ. ನಾವು `ಅಚಿಕ್ ಕಾನ್ಷಿಯಸ್ ಹೊಲಿಸ್ಟಿಕಲಿ ಇಂಟಿಗ್ರೇಟೆಡ್ ಕ್ರಿಮಾ’ ಮತ್ತು `ಗಾರೊ ಹಿಲ್ಸ ಸ್ಟೇಟ ಮೂವಮೆಂಟ್ ಕಮಿಟಿ’ ಪ್ರತಿನಿಧಿಗಳೊಂದಿಗೆ ಚರ್ಚಿಸುತ್ತಿದ್ದೇವೆ. ಅವರ ಕೆಲವು ಬೇಡಿಕೆಗಳಿವೆ. ದಾಳಿ ನಡೆಸಿದವರು ಯಾರು ಎಂಬುದು ಈ ಸಂಘಟನೆಗಳ ಪ್ರತಿನಿಧಿಗಳಿಗೂಗೊತ್ತಿಲ್ಲ. ಅವರು ಹೊರಗಿನವರಾಗಿದ್ದರು. ಅವರನ್ನು ಹುಡುಕಲಾಗುತ್ತಿದೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಮುಖ್ಯಮಂತ್ರಿ ಕಚೇರಿಯೇ ಸುರಕ್ಷಿತವಾಗಿಲ್ಲದಿದ್ದಲ್ಲಿ ಸಾರ್ವಜನಿಕರು ಹೇಗೆ ಸುರಕ್ಷಿತವಾಗಿರುವರು ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!