
ನವ ದೆಹಲಿ – ದೇಶದ ಕೆಲವು ರಾಜ್ಯಗಳಲ್ಲಿ ಕಳೆದ ಕೆಲವು ವಾರದಿಂದಲೇ ಸುರಿಯುತ್ತಿರುವ ಮಳೆ ಇನ್ನೂ ಮುಂದುವರೆದಿದೆ. ದೆಹಲಿಯಲ್ಲಿ ಧಾರಾಕಾರ ಮಳೆಯಿಂದ ಮಂಡಿ ಹೌಸ್ ನಿಂದ ರಿಂಗ್ ರೋಡ ವರೆಗೆ ಮತ್ತು ಉತ್ತರಪ್ರದೇಶದಲ್ಲಿನ ನೋಯ್ಡಾದ ಅನೇಕ ಭಾಗದಲ್ಲಿನ ರಸ್ತೆಗಳು ಜಲವೃತವಾಗಿವೆ. ತೆಲಂಗಾಣ, ಕರ್ನಾಟಕ ಮತ್ತು ಆಂಧ್ರಪ್ರದೇಶ ಈ ರಾಜ್ಯಗಳಲ್ಲಿ ಮಳೆಯಿಂದ ಅನಿರೀಕ್ಷಿತವಾಗಿ ನೆರೆಯ ಸ್ಥಿತಿ ನಿರ್ಮಾಣವಾಗಿದೆ. ತೆಲಂಗಾಣದ ಮಹಬೂಬ್ ನಗರದಲ್ಲಿ ೨ ಅಪ್ರಾಪ್ತ ಹುಡುಗಿಯರು ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಮೇಲಿನ ಎಲ್ಲ ರಾಜ್ಯಗಳಲ್ಲಿ ಅಪಾಯದ ಕ್ಷೇತ್ರಗಳಲ್ಲಿನ ಎಲ್ಲಾ ಶಾಲೆಗಳು ಮತ್ತು ಮಹಾವಿದ್ಯಾಲಯಗಳಿಗೆ ಜುಲೈ ೨೬ ಮತ್ತು ೨೭ ರಂದು ರಜೆ ನೀಡಲಾಗಿದೆ. ಮುಂದಿನ ೩ ದಿನ ಉತ್ತರಾಖಂಡ, ಹಿಮಾಚಲ ಪ್ರದೇಶ, ಗುಜರಾತ, ಮಹಾರಾಷ್ಟ್ರ, ತೆಲಂಗಾಣ, ಗೋವಾ, ಕರ್ನಾಟಕ, ಆಂಧ್ರ ಪ್ರದೇಶ ಸಹಿತ ೨೨ ಕ್ಕಿಂತಲೂ ಹೆಚ್ಚಿನ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.
ದಕ್ಷಿಣ ಮತ್ತು ಓಡಿಸಾದ ಕರಾವಳಿಯ ಅನೇಕ ಭಾಗಗಳಲ್ಲಿ ಧಾರಾಕಾರದಿಂದ ಅತಿಧಾರಕಾರ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಜುಲೈ ೨೭ರ ವರೆಗೆ ಸಮುದ್ರದಲ್ಲಿ ಹೋಗದಿರಲು ಸೂಚನೆ ನೀಡಲಾಗಿದೆ.
Weather Forecast: अगले तीन दिनों तक होगी घनघोर बारिश, कई राज्यों में Alert जारी #weather #imd #rain #delhi #मौसम #बारिश #दिल्ली #आईएमडी https://t.co/VCN09qi3lA
— Oneindia Hindi (@oneindiaHindi) July 26, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!