
ಕಮಲಾಪುರ – ಮುಸಲ್ಮಾನ ವಿದ್ಯಾರ್ಥಿನಿಯರು ಬುರ್ಖಾ ಧರಿಸದೇ ಇದ್ದರಿಂದ ಬಸ್ ಚಾಲಕನೊಬ್ಬ ಬಸ್ ಹತ್ತಿಕೊಳ್ಳಲು ನಿರಾಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಅದರಲ್ಲಿ ಚಾಲಕನು, `ವಿದ್ಯಾರ್ಥಿನಿಯರು ಬುರ್ಖಾ ಹಾಕಿಕೊಂಡರೆ ಮಾತ್ರ ಬಸ್ನಲ್ಲಿ ಹತ್ತಿಸಿಕೊಳ್ಳಲಾಗುವುದು’ ಎಂದು ಹೇಳುತ್ತಿದ್ದಾನೆ. ಇದರಿಂದ ಈ ವಿದ್ಯಾರ್ಥಿನಿಯರಿಗೆ ಬಸ್ ಹತ್ತಲು ಸಾಧ್ಯವಾಗಲಿಲ್ಲ. ಈ ವಿದ್ಯಾರ್ಥಿನಿಯರು ಹಿಜಾಬ್ (ಮುಸ್ಲಿಂ ಮಹಿಳೆಯರ ತಲೆ ಮತ್ತು ಕುತ್ತಿಗೆ ಮುಚ್ಚುವ ವಸ್ತ್ರ) ಧರಿಸಿದ್ದರೂ ಚಾಲಕ ಅವರನ್ನು ಬಸ್ ಹತ್ತಲು ಬಿಡಲಿಲ್ಲ. ಚಾಲಕನು ಈ ಮುಸ್ಲಿಂ ವಿದ್ಯಾರ್ಥಿನಿಯರಿಗೆ `ನೀವು ಮುಸಲ್ಮಾನರಾಗಿರುವುದರಿಂದ ಹಿಜಾಬ್ ಅಲ್ಲ, ಬುರ್ಖಾ ಧರಿಸಬೇಕು ಎಂದು ಹೇಳಿದ್ದಾನೆ.
ಬುರ್ಖಾ ಧರಿಸಿ ಬಾ..ಇಲ್ಲದಿದ್ದರೆ ಬಸ್ಸಿಗೆ ಹತ್ತಲು ಬಿಡೋದಿಲ್ಲ: ಕಲಬುರಗಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಬಸ್ ಚಾಲಕ ಆವಾಜ್! https://t.co/miYwRzTbKT via @KannadaPrabha @XpressBengaluru #Burqua #BusDriver #Student #Kalaburagi #ಕಲಬುರಗಿ #ಬಸ್ ಚಾಲಕ #ಬುರ್ಖಾ #ವಿದ್ಯಾರ್ಥಿನಿ
— kannadaprabha (@KannadaPrabha) July 27, 2023
1. ಸ್ಥಳೀಯರು ಈ ಬಗ್ಗೆ ಚಾಲಕನನ್ನು ಪ್ರಶ್ನಿಸಿದಾಗ ಬಸ್ ಕೆಟ್ಟಿತ್ತು. ಇದರಿಂದ ವಿದ್ಯಾರ್ಥಿಗಳು ಗಲಾಟೆ ಮಾಡುತ್ತಿದ್ದರು. ಬಸ್ಸು ಕೆಟ್ಟಿದೆ ಎಂದು ಹೇಳಿದರೂ ಅವರು ಬಸ್ಸು ಹತ್ತಿದ್ದರು ಎಂದು ಹೇಳಿದನು.
2. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಚಾಲಕ ನಡೆದುಕೊಂಡಿರುವುದು ಬಹಳ ತಪ್ಪಾಗಿದೆ. ಯಾವ ರೀತಿಯ ಉಡುಗೆ ಧರಿಸಬೇಕು ಎನ್ನುವುದು ಆ ವಿದ್ಯಾರ್ಥಿನಿಯರ ಹಕ್ಕು ಎಂದೂ ರೆಡ್ಡಿಯವರು ಹೇಳಿದ್ದಾರೆ.
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!