ಆರ್ಥಿಕ ಸಂಕಷ್ಟದಲ್ಲಿರುವ ಜಿಹಾದಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಇವರ ನಾಟಕ !

ಇಸ್ಲಾಮಾಬಾದ್ (ಪಾಕಿಸ್ತಾನ) – ಹಸಿವಿನಿಂದ ಕಂಗೆಟ್ಟಿರುವ ಪಾಕಿಸ್ತಾನ ಇದೀಗ ಭಾರತವನ್ನು ಓಲೈಸುವ ನಾಟಕವಾಡುತ್ತಿದೆ. ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಜ್ ಷರೀಫ್ ಇವರು ಭಾರತಕ್ಕೆ ಕರೆ ನೀಡುತ್ತಾ, ಯುದ್ಧ ಒಂದು ಆಯ್ಕೆಯಲ್ಲ ಮತ್ತು ನಾವು ಭಾರತದೊಂದಿಗೆ ಚರ್ಚೆ ನಡೆಸಲು ಸಿದ್ಧರಿದ್ದೇವೆ ಎಂದು ಹೇಳಿದರು. ಒಂದು ವೇಳೆ ಭಾರತ ಈ ವಿಷಯದಲ್ಲಿ ಗಂಭೀರವಾಗಿದ್ದರೆ, ನಾವು ಅದರೊಂದಿಗೆ ಚರ್ಚಿಸಲು ಬಯಸುತ್ತೇವೆ.
(ಸೌಜನ್ಯ – Aaj Tak)
ಕಳೆದ 75 ವರ್ಷಗಳಲ್ಲಿ ಉಭಯ ದೇಶಗಳ ನಡುವೆ 3 ಬಾರಿ ಯುದ್ಧಗಳು ನಡೆದಿವೆ. ಇದರಿಂದ ಕೇವಲ ಬಡತನ, ನಿರುದ್ಯೋಗ ಮತ್ತು ಮೂಲಸೌಕರ್ಯಗಳ ಕೊರತೆಯಂತಹ ಸಮಸ್ಯೆಗಳು ನಿರ್ಮಾಣವಾಗಿದೆ ಎಂದು ಹೇಳಿದರು. ಪಾಕಿಸ್ತಾನ ಪರಮಾಣು ಸಶಸ್ತ್ರ ರಾಷ್ಟ್ರವಾಗಿದೆ. ಇದು ಆಕ್ರಮಣಕಾರಿಯಾಗಲು ಅಲ್ಲ, ತಮ್ಮನ್ನು ರಕ್ಷಿಸಿಕೊಳ್ಳಲು ಇದೆ ! ಒಂದು ವೇಳೆ ಪರಮಾಣು ಯುದ್ಧದಂತಹ ಪರಿಸ್ಥಿತಿ ಸಂಭವಿಸಿದರೆ, ಅದರ ಬಗ್ಗೆ ಹೇಳಲು ಯಾರೂ ಜೀವಂತವಾಗಿರುವುದಿಲ್ಲ. ಯುದ್ಧವು ಒಂದು ಆಯ್ಕೆಯಾಗಿಲ್ಲ! ಎಂದು ಹೇಳಿದರು.
Pakistan’s PM Shehbaz Sharif emphasises dialogue over conflict with Indiahttps://t.co/YAfqhdIfQn
— WION (@WIONews) August 1, 2023
ಸಂಪಾದಕೀಯ ನಿಲುವುಪಾಕಿಸ್ತಾನ ಜಿಹಾದಿ ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸುವುದನ್ನು ನಿಲ್ಲಿಸಬೇಕು. ಕುಖ್ಯಾತ ಭಯೋತ್ಪಾದಕ ಹಾಫೀಜ್ ಸಯೀದ್, ದಾವೂದ್ ಇಬ್ರಾಹಿಂ ನನ್ನು ಭಾರತಕ್ಕೆ ಹಸ್ತಾಂತರಿಸಬೇಕು. ಅಲ್ಲಿನ ಹಿಂದೂಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಸ್ತಾಂತರಿಸಬೇಕು. ಆ ನಂತರವೇ ಭಾರತ ಪಾಕಿಸ್ತಾನದೊಂದಿಗೆ ಚರ್ಚಿಸಲು ವಿಚಾರ ಮಾಡಬಹುದು ಎನ್ನುವುದನ್ನು ಅವರು ಗಮನಕ್ಕೆ ತೆಗೆದುಕೊಳ್ಳಬೇಕು ! |
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban