ವ್ಯಕ್ತಿ ಗಾಂಜಾ ಸೇವಿಸಿದ್ದ ವೈದ್ಯಕೀಯ ತಪಾಸಣೆಯಲ್ಲಿ ಬಹಿರಂಗ

ಬಂಟ್ವಾಳ (ದ.ಕ) – ಇಲ್ಲಿಯ ನಂದಾಪುರ ಜಂಕ್ಷನ್ ಬಳಿ ಅಬ್ದುಲ್ ಸಲೀಂ (32 ವರ್ಷ) ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದನು. ಇದರಿಂದ ಬೇಸತ್ತ ಸಾರ್ವಜನಿಕರು ಸ್ಥಳಿಯ ಪೊಲೀಸರಿಗೆ ದೂರು ನೀಡಿದರು. ಬಳಿಕ ಬಂಟ್ವಾಳ ನಗರ ಪೊಲೀಸ್ ಎಸ್.ಐ. ರಾಮಕೃಷ್ಣ ಇವರ ನೇತೃತ್ವದಲ್ಲಿ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿದರು. ನಂತರ ಆತನ ವೈದ್ಯಕೀಯ ತಪಾಸಣೆ ಮಾಡಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈತ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿಯಾಗಿದ್ದು ಆತ ಮುನ್ನೂರು ಗ್ರಾಮದ ನಂದಾವರದ ತನ್ನ ಸಂಬಂಧಿಕರ ಮನೆಗೆ ಬಂದಾಗ ಈ ರೀತಿಯ ಕೃತ್ಯ ಎಸಗಿದ್ದ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!