ನುಹ್ (ಹರಿಯಾಣ)ದಲ್ಲಿ ಹಿಂಸಾಚಾರ ಪ್ರಕರಣ

ನವ ದೆಹಲಿ – ಸರ್ವೋಚ್ಚ ನ್ಯಾಯಾಲವು ನುಹ್ (ಹರಿಯಾಣ) ಹಿಂಸಾಚಾರವನ್ನು ಖಂಡಿಸಲು ದೇಶಾದ್ಯಂತ ವಿಶ್ವ ಹಿಂದೂ ಪರಿಷತ್ ಆಯೋಜಿಸಿರುವ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯವು ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿ ಆಗಸ್ಟ್ 4 ರೊಳಗೆ ಪ್ರತಿಜ್ಞಾಪತ್ರ ಸಲ್ಲಿಸುವಂತೆ ಆದೇಶಿಸಿದೆ.
1. ಹಿರಿಯ ವಕೀಲ ಸಿ.ಯು. ಸಿಂಗ್ ಇವರು ಪ್ರತಿಭಟನೆಯ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯಲ್ಲಿ, ದೆಹಲಿಯ 23 ಸ್ಥಳಗಳಲ್ಲಿ ವಿಶ್ವ ಹಿಂದೂ ಪರಿಷತ್ತು ಮತ್ತು ಬಜರಂಗದಳ ಪ್ರತಿಭಟನೆ ನಡೆಸಲಿದ್ದು, ಈ ಸ್ಥಳದಲ್ಲಿ ಪ್ರಚೋದನಕಾರಿ ಭಾಷಣಗಳು ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಈ ಅರ್ಜಿಯ ವಿಚಾರಣೆಯನ್ನು ಶೀಘ್ರ ನಡೆಸಿ ಪ್ರತಿಭಟನೆಯನ್ನು ನಿಷೇಧಿಸಬೇಕು ಎಂದು ಕೇಳಿದ್ದರು.
2. ಇದಕ್ಕೆ ನ್ಯಾಯಾಲಯವು, ಪ್ರತಿಭಟನೆಯನ್ನು ನಿಷೇಧಿಸಲು ನಿರಾಕರಿಸಿತು; ಆದರೆ ಈ ಪ್ರತಿಭಟನೆಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಂತೆ ತಿಳಿಸಿ ಪ್ರತಿಭಟನೆಯನ್ನು ಚಿತ್ರೀಕರಣ ಮಾಡುವಂತೆ ಆದೇಶಿಸಿತು. ಹಾಗೆಯೇ ಆವಶ್ಯಕತೆಯನುಸಾರ ಹೆಚ್ಚುವರಿ ಬಂದೋಬಸ್ತ ಮಾಡಿಕೊಳ್ಳುವಂತೆ ಸರಕಾರಕ್ಕೆ ತಿಳಿಸಿದೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!