ಭಾಜಪ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !

ಮೊರಾದಾಬಾದ್ (ಉತ್ತರ ಪ್ರದೇಶ) – ಭಾಜಪ ನಾಯಕ ಅನುಜ್ ಚೌಧರಿ (35 ವರ್ಷಗಳು) ಅವರನ್ನು ಆಗಸ್ಟ್ 10, 2023 ರಂದು ಇಲ್ಲಿನ ಪಾರ್ಶ್ವನಾಥ್ ಪ್ರತಿಭಾ ಸೊಸೈಟಿಯಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಯಿತು. ಅವರ ಭದ್ರತೆಗೆ ಸಂಭಳ ಪೊಲೀಸರು ಓರ್ವ ಭದ್ರತಾ ಸಿಬ್ಬಂದಿಯನ್ನು ನೇಮಿಸಿದ್ದರು. ಹಾಗೆಯೇ ಅನುಜ್ ಚೌಧರಿ ಅವರು 2 ಖಾಸಗಿ ಭದ್ರತಾ ಸಿಬ್ಬಂದಿಯನ್ನೂ ಇಟ್ಟುಕೊಂಡಿದ್ದರು. ಎಂದಿನಂತೆ ಅನುಜ್ ಚೌಧರಿ ತಮ್ಮ ಸ್ನೇಹಿತರೊಂದಿಗೆ ಸೊಸೈಟಿಯಲ್ಲಿ ಓಡಾಡುತ್ತಿದ್ದರು. ಅವರು ಗೇಟ್ ಬಳಿ ಬಂದಾಗ ಎದುರಿನಿಂದ ಬೈಕ್ ನಲ್ಲಿ ಬಂದ ಮೂವರು ಗೂಂಡಾಗಳು ಚೌಧರಿ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ತಲೆ, ಬೆನ್ನು ಮತ್ತು ಭುಜಕ್ಕೆ ಗುಂಡು ತಗುಲಿ ಅನುಜ್ ಚೌಧರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಅನುಜ್ ಚೌಧರಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು; ಆದರೆ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ಪೊಲೀಸ್ ಅಧೀಕ್ಷಕ ಅಖಿಲೇಶ್ ಬದೌರಿಯಾ ನೇತೃತ್ವದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
On camera: BJP leader shot dead during evening walk in UP’s Moradabad
(@Dhar_ani reports)https://t.co/xKEpzm0frE pic.twitter.com/IlXZFowo3x
— Hindustan Times (@htTweets) August 11, 2023
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.