|

ಪುಣೆ, ಆಗಸ್ಟ್ 12 (ಸುದ್ದಿ) – ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಹಿಂದೂ ಯುವತಿಯರನ್ನು ‘ಲವ್ ಜಿಹಾದ್’ನ ಬಲೆಗೆ ಸೆಳೆದು ಅವರಿಂದ ಮಾದಕ ಪದಾರ್ಥಗಳನ್ನು ಮಾರಾಟ ಮಾಡಿಸುತ್ತಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಹಿಂದೂ ಸಂತ್ರಸ್ತೆ ವಿಶ್ರಾಂತವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಪ್ರಕರಣದಲ್ಲಿ ಮತಾಂಧ ಅಯಾನ್ ನನ್ನು ಟಿಂಗರೆನಗರದಿಂದ ಬಂಧಿಸಲಾಗಿದೆ. ಇದರಲ್ಲಿ ಅಯಾನ್ ಮತ್ತು ಅವನ ಅಣ್ಣ ಬಿಲಾಲ್ ಇನಾಮದಾರ್ ಹಾಗೆಯೇ ಸಂಪೂರ್ಣ ಕುಟುಂಬ ಭಾಗಿಯಾಗಿರುವ ಸಂಶಯವಿದೆ. ಈ ಮತಾಂಧರು 2 ಸಾವಿರ ಹುಡುಗಿಯರನ್ನು ಲವ್ ಜಿಹಾದ್ ನಲ್ಲಿ ಸಿಲುಕಿಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ (ಮತಾಂಧರಿಗೆ) ಗಲ್ಲುಶಿಕ್ಷೆ ವಿಧಿಸಬೇಕು ಎಂದು ಸಂತ್ರಸ್ತೆಯ ಕುಟುಂಬ ಆಗ್ರಹಿಸಿದೆ.
ಬಿಲಾಲನು ಮಾದಕ ಪದಾರ್ಥಗಳ ಮಾರಾಟದ ದೊಡ್ಡ ಜಾಲವನ್ನು ಹೊಂದಿದ್ದು, ಆತನೇ ಇದರ ಪ್ರಮುಖ ಸೂತ್ರಧಾರನಾಗಿದ್ದಾನೆ. ಅಯಾನ್ ಹಿಂದೂ ಹುಡುಗಿಯರಿಗೆ ಆಮಿಷ ತೋರಿಸಿ ‘ಲವ್ ಜಿಹಾದ್’ನ ಬಲೆಗೆ ಸೆಳೆಯುತ್ತಿದ್ದ. ಅಯಾನ್ ತನ್ನ ಕೈಯಲ್ಲಿ ತ್ರಿಶೂಲ ಹಚ್ಚೆ ಹಾಕಿಸಿಕೊಂಡಿದ್ದ ಮತ್ತು ಕುತ್ತಿಗೆಯಲ್ಲಿ ರುದ್ರಾಕ್ಷಿಯನ್ನು ಧರಿಸಿದ್ದ. ಈತ ತನ್ನ ನೈಜ ಗುರುತನ್ನು ಮರೆಮಾಚಿ ಹಿಂದೂ ಎಂದು ಬಿಂಬಿಸಿ ಹಿಂದೂ ಹೆಣ್ಣು ಮಕ್ಕಳನ್ನು ವಂಚಿಸುತ್ತಿದ್ದನು. ಬಿಲಾಲ್ ಮತ್ತು ಅಯಾನ್ ವಂಚನೆಗೊಳಗಾದ ಹುಡುಗಿಯರನ್ನು ಬಲವಂತದಿಂದ ವಿವಿಧೆಡೆ ಮಾದಕ ಪದಾರ್ಥಗಳ ಮಾರಾಟ ಮಾಡಲು ಅನಿವಾರ್ಯಗೊಳಿಸುತ್ತಿದ್ದರು. ಪುಣೆಯ ಕೋರೆಗಾಂವ್ ಪಾರ್ಕ್ನಲ್ಲಿರುವ ಕೆಲವು ‘ಪಬ್’ಗಳಲ್ಲಿ ಸಂತ್ರಸ್ತ ಹಿಂದೂ ಹುಡುಗಿಯರ ಮೂಲಕ ಮಾದಕ ಪದಾರ್ಥಗಳ ಮಾರಾಟ ಮಾಡಲಾಗುತ್ತಿದೆ ಎಂಬ ಸಂಶಯವೂ ವ್ಯಕ್ತವಾಗುತ್ತಿದೆ.
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!