ನಾಗರಪಂಚಮಿ

ನಾಗರಪಂಚಮಿ – ಪ್ರಾಣಿಮಾತ್ರರಲ್ಲಿ ಈಶ್ವರನನ್ನು ನೋಡಲು ಕಲಿಸುವ ಹಬ್ಬ ನಾಗರಪಂಚಮಿ ಹಬ್ಬಗಳ ತಿಂಗಳಾಗಿರುವ ಶ್ರಾವಣಮಾಸದಲ್ಲಿ ಬರುವ ಮೊದಲ ಹಬ್ಬ. ನಾಗರ ಪಂಚಮಿಯನ್ನು ಶ್ರಾವಣ ಶುಕ್ಲ ಪಂಚಮಿ ಯಂದು (ಆಗಸ್ಟ್ ೨೧) ಆಚರಿಸಲಾಗುತ್ತದೆ. ಈ ದಿನದಂದು ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ, ಹೊಸ ಬಟ್ಟೆ-ಅಲಂಕಾರವನ್ನು ಧರಿಸಿ, ನಾಗ ದೇವರನ್ನು ಪೂಜಿಸಿ, ನಾಗ ದೇವರಿಗೆ ಹಾಲಿನ ನೈವೇದ್ಯವನ್ನು ಅರ್ಪಿಸುತ್ತಾರೆ. ನಾಗಗಳ ಪೂಜೆಯನ್ನು ಮಾಡುವುದರಿಂದ ಸರ್ಪಭಯ ಉಳಿಯುವುದಿಲ್ಲ ಮತ್ತು ವಿಷಬಾಧೆಯಾಗುವ ಸಂಕಟ ತಪ್ಪುತ್ತದೆ ಎಂದು ಭಕ್ತರ ಬಲವಾದ ನಂಬಿಕೆಯಿದೆ. ನಾಗರಪಂಚಮಿಯ ಇತಿಹಾಸ, ಅಂದು ಏನು ಮಾಡಬೇಕು, ಏನು ಮಾಡಬಾರದು, ಇವೆಲ್ಲವುಗಳ ಹಿಂದಿರುವ ಶಾಸ್ತ್ರ ಇಲ್ಲಿ ನೀಡುತ್ತಿದ್ದೇವೆ.

ನಾಗರಪಂಚಮಿಯಂದು ಏನೇನು ಮಾಡಬೇಕು ?

ಉಪವಾಸ : ಉಪವಾಸದಿಂದ ಶಕ್ತಿ ಹೆಚ್ಚಾಗಿ ಅದರ ಫಲವೂ ಲಭಿಸುತ್ತದೆ. – ಶ್ರೀಕೃಷ್ಣ (ಕು. ಮೇಘಾ ನಕಾತೆ ಇವರ ಮಾಧ್ಯಮದಿಂದ), ೨.೮.೨೦೦೫, ಮಧ್ಯಾಹ್ನ ೪.೦೫ ನಾಗ ದೇವರಿಗೆ ಪೂಜೆ ಸಲ್ಲಿಸಿ ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ ರೂಪದಲ್ಲಿರುವ ಶಿವನ ಪೂಜೆಯೇ. ಆದುದರಿಂದ ಆ ದಿನ ವಾತಾವರಣದಲ್ಲಿರುವ ಶಿವ-ಲಹರಿಗಳು ಆಕರ್ಷಿತಗೊಂಡು ಆ ಜೀವಕ್ಕೆ ಇತರ ೩೬೪ ದಿನಗಳ ಕಾಲ ಉಪಯುಕ್ತವಾಗುತ್ತವೆ.

ಸ್ತ್ರೀಯರು ನಾಗ ದೇವರಿಗೆ ಪೂಜೆ ಸಲ್ಲಿಸುವುದರಿಂದ ಅವರಿಗೆ ಶಕ್ತಿ ತತ್ತ್ವ ಪ್ರಾಪ್ತವಾಗುತ್ತದೆ : ಸ್ತ್ರೀಯರು ಸಹೋದರನೆಂದು ತಿಳಿದು ನಾಗದೇವರಿಗೆ ಪೂಜೆ ಸಲ್ಲಿಸು ವುದರಿಂದ ಅವರ ಸಹೋದರನ ಆಯುಷ್ಯ ವೃದ್ಧಿಯಾಗುತ್ತದೆ. ಹೊಸ ಬಟ್ಟೆ ಮತ್ತು ಅಲಂಕಾರ ಧರಿಸಿ ಇದರಿಂದ ಆನಂದ ಮತ್ತು ಚೈತನ್ಯದ ಲಹರಿಗಳು ಆಕರ್ಷಿಸಲ್ಪಡುತ್ತವೆ. ಸ್ತ್ರೀಯರು ಉಯ್ಯಾಲೆಯಲ್ಲಿ ಆಡಬೇಕು ಇದರಿಂದ ಕ್ಷಾತ್ರಭಾವ ಮತ್ತು ಭಕ್ತಿಭಾವ ಹೆಚ್ಚಾಗಿ ಅದರಿಂದ ಸಾತ್ತ್ವಿಕತೆಯ ಲಹರಿಗಳು ಲಭಿಸುತ್ತವೆ.

ಪ್ರಾರ್ಥನೆ ಮಾಡಿ : ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು – ‘ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಿಸುವಂತಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣ ಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣಗಳ ಶುದ್ಧಿಯಾಗಲಿ.’ ನಾಗರ ಪಂಚಮಿಯಂದು ಸಹೋದರಿಯ ಮೊರೆಯನ್ನು ಈಶ್ವರನು ಆಲಿಸುತ್ತಾನೆ. ಆದುದರಿಂದ ಸಹೋದರಿಯು ತನ್ನ ಸಹೋದರನ ಉನ್ನತಿಗಾಗಿ ದೇವರಲ್ಲಿ ಕಳಕಳಿಯಿಂದ ಮುಂದಿನಂತೆ ಪ್ರಾರ್ಥಿಸ ಬೇಕು ? ‘ದೇವರೇ, ನನ್ನ ಸಹೋದರನಿಗೆ ಸದ್ಬುದ್ಧಿ, ಶಕ್ತಿ ಮತ್ತು ಸಾಮರ್ಥ್ಯವನ್ನು ದಯಪಾಲಿಸಿ’.

ಕೆಟ್ಟ ಶಕ್ತಿ : ವಾತಾವರಣದಲ್ಲಿ ಉತ್ತಮ ಹಾಗೂ ಕೆಟ್ಟ ಎರಡೂ ಶಕ್ತಿಗಳು ಕಾರ್ಯನಿರತವಾಗಿರುತ್ತವೆ. ಒಳ್ಳೆಯ ಶಕ್ತಿ ಒಳ್ಳೆಯ ಕಾರ್ಯಕ್ಕಾಗಿ ಮಾನವನಿಗೆ ಸಹಾಯ ಮಾಡುತ್ತವೆ ಹಾಗೂ ಕೆಟ್ಟ ಶಕ್ತಿಗಳು ಅವನಿಗೆ ತೊಂದರೆ ಕೊಡುತ್ತವೆ. ಹಿಂದಿನ ಕಾಲದಲ್ಲಿ ಋಷಿಮುನಿಗಳ ಯಜ್ಞಗಳಲ್ಲಿ ರಾಕ್ಷಸರು ವಿಘ್ನಗಳನ್ನು ತಂದಿರುವ ಅನೇಕ ಕಥೆಗಳು ವೇದ-ಪುರಾಣಗಳಲ್ಲಿ ಇರುತ್ತವೆ. ‘ಅಥರ್ವವೇದದಲ್ಲಿ ಅನೇಕ ಕಡೆಗಳಲ್ಲಿ ಕೆಟ್ಟ ಶಕ್ತಿ, ಉದಾ. ಅಸುರರು, ರಾಕ್ಷಸರು, ಪಿಶಾಚಿ, ಇವರ ಪ್ರತಿಬಂಧದ ಮಂತ್ರಗಳನ್ನು ಹೇಳಲಾಗಿದೆ. ಕೆಟ್ಟ ಶಕ್ತಿಗಳ ತೊಂದರೆಯ ನಿವಾರಣೆಗಾಗಿ ವಿವಿಧ ಆಧ್ಯಾತ್ಮಿಕ ಉಪಾಯಗಳನ್ನು ವೇದ ಮತ್ತು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.