
ಪಾಟಲಿಪುತ್ರ (ಬಿಹಾರ) – ರಾಜ್ಯದ ಪಶ್ಚಿಮ ಚಂಪಾರಣ ಜಿಲ್ಲೆಯ ಮಜೌಲಿಯಾ ಪ್ರದೇಶದ ‘ಸೀತಾರಾಮ ಶಾಲೆಯಲ್ಲಿ’ ಭಾರತದ ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ಕೆಲವು ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಕೂಡ ಹಾರಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಆಗಸ್ಟ 15 ರಂದು ಬೆಳಗ್ಗೆ ಶಾಲೆಯಲ್ಲಿ ಧ್ವಜಾರೋಹಣ ನಡೆಯುತ್ತಿದ್ದಾಗ ಕೆಲವು ಮುಸ್ಲಿಂ ಯುವಕರು ಶಾಲಾ ಆವರಣಕ್ಕೆ ನುಗ್ಗಿ ಇಸ್ಲಾಮಿಕ್ ಧ್ವಜವನ್ನು ಹಾರಿಸಿದರು. ಅಲ್ಲದೇ ಮುಸ್ಲಿಂ ಯುವಕರು ಕೆಲವು ಆಕ್ಷೇಪಾರ್ಹ ಘೋಷಣೆಗಳು ಕೂಗಿದರು. ಈ ವೇಳೆ ಶಿಕ್ಷಕರು ಹಾಗೂ ಸ್ಥಳೀಯರು ವಿರೋಧಿಸಿದರು. ಪೊಲೀಸರಿಗೆ ಮಾಹಿತಿ ಸಿಗುತ್ತಲೇ ಅವರು ಸ್ಥಳಕ್ಕೆ ತಲುಪಿದರು; ಆದರೆ ಅದಕ್ಕೂ ಮುನ್ನ ಮುಸ್ಲಿಂ ಯುವಕರು ಅಲ್ಲಿಂದ ಓಡಿ ಹೋಗಿದ್ದರು. (ಅಂತಹ ಸಂದರ್ಭದಲ್ಲಿ ಶಿಕ್ಷಕರು, ಸ್ಥಳೀಯರು ಮತ್ತು ವಿದ್ಯಾರ್ಥಿಗಳು ವೀಕ್ಷಕರ ಪಾತ್ರವನ್ನು ವಹಿಸಿದ್ದರೇ? ಹಿಂದೂಗಳ ಇಂತಹ ಹತಾಶ ಮನಃಸ್ಥಿತಿಯಿಂದಲೇ ಇಂದು ಮತಾಂಧರು ಉದ್ಧಟತನದಿಂದ ನಡೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ತಿಳಿಯಿರಿ ! – ಸಂಪಾದಕರು) ಈ ಸಮಯದಲ್ಲಿ, ಆ ಯುವಕರಲ್ಲಿ ಹನ್ನೊಂದನೇ ತರಗತಿಯಲ್ಲಿ ಓದುತ್ತಿರುವ ಶಾಹಿದ್ ಹಸನ್ ಎಂಬ ಯುವಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಶಾಲೆಯ ಪ್ರಾಂಶುಪಾಲ ಅಶೋಕ ಕುಮಾರ ಅವರು ಮುಸ್ಲಿಂ ಯುವಕರ ಈ ಕೃತ್ಯವನ್ನು ನಿರ್ಲಕ್ಷಿಸಿ ವಿದ್ಯಾರ್ಥಿಗಳಿಗೆ ತಿನಿಸು ನೀಡುವುದರಲ್ಲಿ ಮಗ್ನರಾಗಿದ್ದರು ಎಂಬ ಆರೋಪ ಕೇಳಿ ಬರುತ್ತಿದೆ.
Bihar: Muslim youths raise Islamic flags at a school in West Champaran on 15th August, one Shahid Hasan arrestedhttps://t.co/9RHwWuBg2Q
— OpIndia.com (@OpIndia_com) August 16, 2023
ಕೇರಳದಲ್ಲಿ ರಾಷ್ಟ್ರಧ್ವಜ ಹಾರಿಸುವಾಗ ಮಸೀದಿಯ ಧರ್ಮಗುರುಗಳ ನಡುವೆ ವಾಗ್ವಾದ !

ಇನ್ನೊಂದು ಪ್ರಕರಣದಲ್ಲಿ, ಕೇರಳದ ಕಾಸರಗೋಡು ಜಿಲ್ಲೆಯ ‘ಜಮಾತ್ ಮಸೀದಿ ಸಮಿತಿ’ ಪ್ರದೇಶದಲ್ಲಿ ಧ್ವಜಾರೋಹಣ ಮಾಡುವಾಗ ಅಲ್ಲಿದ್ದ ಮುಸ್ಲಿಂ ಮುಖಂಡರ ನಡುವೆ ವಾಗ್ವಾದ ನಡೆದಿದೆ. ಆದ್ದರಿಂದ ರಾಷ್ಟ್ರಧ್ವಜದ ಅವಮಾನವಾಯಿತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಈ ಸಂಬಂಧದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸ್ಥಳೀಯ ಪತ್ರಕರ್ತರು ಮಾಹಿತಿ ನೀಡಿದ್ದಾರೆ.
ಸಂಪಾದಕೀಯ ನಿಲುವು
|
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!