
ನವ ದೆಹಲಿ – ಫೆಬ್ರವರಿ 27, 2002 ರಂದು ಗುಜರಾತ್ನ ಗೋಧ್ರಾದಲ್ಲಿನ ಸಾಬರಮತಿ ಎಕ್ಸ್ಪ್ರೆಸ್ ಬೋಗಿಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶೌಕತ್ ಯೂಸುಫ್, ಬಿಲಾಲ್ ಅಬ್ದುಲ್ಲಾ ಮತ್ತು ಸಿದ್ದಿಕಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇದು ಅತ್ಯಂತ ಗಂಭೀರವಾದ ಪ್ರಕರಣವಾಗಿದೆ ಎಂದು ತಿಳಿಸಿ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ಸಾಬರಮತಿ ಎಕ್ಸ್ಪ್ರೆಸ್ ಬೋಗಿಗಳಿಗೆ ಬೆಂಕಿ ಹಚ್ಚಿದ ನಂತರ ಗುಜರಾತ್ನ ಅನೇಕ ಸ್ಥಳಗಳಲ್ಲಿ ಗಲಭೆ ಭುಗಿಲೆದ್ದಿತ್ತು.
ಫೆಬ್ರವರಿ 27, 2002 ರಂದು, ಮುಸ್ಲಿಮರ ಗುಂಪು ಅಯೋಧ್ಯೆಯಿಂದ ಬರುತ್ತಿದ್ದ ಸಾಬರಮತಿ ಎಕ್ಸ್ಪ್ರೆಸ್ನ ಬೋಗಿಯನ್ನು ಜ್ವಲನಶೀಲ ಪದಾರ್ಥವನ್ನು ಎಸೆದು ಸುಟ್ಟು ಹಾಕಿತ್ತು. ಕರಸೇವಕರಿಂದ ತುಂಬಿದ್ದ ಈ ಬೋಗಿಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 59 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಆರೋಪಿಗಳಿಗೆ ವಿಶೇಷ ನ್ಯಾಯಾಲಯವು ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಗುಜರಾತ್ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ. ತದನಂತರ ಅಪರಾಧಿಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಇನ್ನೂ ಬಾಕಿ ಇದೆ. ಈ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಸೂಕ್ತ ನ್ಯಾಯಪೀಠದ ಮುಂದೆ ಇಡಲಾಗುವುದು ಎಂದು ನ್ಯಾಯಾಲಯ ಹೇಳಿದೆ. ಏಪ್ರಿಲ್ 21, 2023 ರಂದು, ಸರ್ವೋಚ್ಚ ನ್ಯಾಯಾಲಯವು ಇದೇ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ 8 ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿತ್ತು.
Serious incident, not an isolated case of death: Supreme Court rejects bail pleas of 3 convicts in the Godhra train carnage casehttps://t.co/L9SEcCcrtK
— OpIndia.com (@OpIndia_com) August 14, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ