‘ವಿದ್ಯಾವಂತ ಅಭ್ಯರ್ಥಿಗಳಿಗೆ ಮತ ನೀಡಿ’ ಎಂದು ಶಿಕ್ಷಕನು ವಿದ್ಯಾರ್ಥಿಗಳಿಗೆ ಹೇಳುವ ಮೂಲಕ ಪ್ರಧಾನಿ ಮೋದಿಯವರನ್ನು ಟೀಕಿಸಿದ ಪ್ರಕರಣ

ನವ ದೆಹಲಿ – ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡುವ ‘ಅನ್ ಅಕಾಡೆಮಿ’ಯ ಶಿಕ್ಷಕ ಕರಣ್ ಸಾಂಗ್ವಾನ್ ಕೆಲ ದಿನಗಳ ಹಿಂದೆ, ‘ವಿದ್ಯಾವಂತ ಅಭ್ಯರ್ಥಿಗಳಿಗೆ ಮತ ನೀಡಿ. ವಿಷಯಗಳನ್ನು ಅರ್ಥ ಮಾಡಿಕೊಳ್ಳುವ ವ್ಯಕ್ತಿಯನ್ನು ಆರಿಸಿ ತನ್ನಿರಿ’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದರು. ಸಾಂಗ್ವಾನ್ ನ ಗುರಿ ಪ್ರಧಾನಿ ಮೋದಿಯವರ ಮೇಲೆ ಇತ್ತು ಎಂದು ಹೇಳಲಾಗುತ್ತಿದೆ. ಇದರಿಂದ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ವಿಷಯದ ಗಂಭೀರತೆಯನ್ನು ಕಂಡು ‘ಅನ್ ಅಕಾಡೆಮಿ’ಯು ಸಾಂಗ್ವಾನ್ ಅವರನ್ನು ವಜಾಗೊಳಿಸಿತು.
(ಸೌಜನ್ಯ -NDTV)
ಸಂಸ್ಥೆಯ ಸಹಸಂಸ್ಥಾಪಕ ರೋಮನ ಸೈನಿ ಇವರು, ಈ ರೀತಿ ವೈಯಕ್ತಿಕ ನಿಲುವನ್ನು ವಿದ್ಯಾರ್ಥಿಗಳಿಗೆ ಮಂಡಿಸುವುದು ತಪ್ಪು. ನಾವು ಶಿಕ್ಷಣದ ವೇದಿಕೆಯಾಗಿದ್ದೇವೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಬದ್ಧತೆಯಾಗಿದೆ. ತರಗತಿಯು ಕೆಲವು ವೈಯಕ್ತಿಕ ಅಭಿಪ್ರಾಯಗಳನ್ನು ಪ್ರಸಾರ ಮಾಡುವ ಸ್ಥಳವಾಗಿರುವುದಿಲ್ಲ. ಅಂತೆಯೇ ಆಗಸ್ಟ್ 19 ರಂದು ರಾತ್ರಿ 8 ಗಂಟೆಗೆ ಕರಣ್ ಸಾಂಗ್ವಾನ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ವಿಶೇಷ ನಿಲುವನ್ನು ಮಂಡಿಸಲಿದ್ದಾರೆ ಎಂದು ಟ್ವೀಟ್ ಮಾಡಿ ಹೇಳಿದ್ದಾರೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ