|

ಸೂರ್ಯಪೇಟ (ತೆಲಂಗಾಣ) – ಸೂರ್ಯಪೇಟ ಜಿಲ್ಲೆಯ ಇರಾವರಮ ಗ್ರಾಮದಲ್ಲಿ ಬಾಲ ಉಗ್ರ ನರಸಿಂಹ ಸ್ವಾಮಿಯ ಪ್ರಸಿದ್ಧ ದೇವಸ್ಥಾನವಿದೆ. ಪ್ರತಿ ಶುಕ್ರವಾರ ಮತ್ತು ಶನಿವಾರ ಈ ದೇವಸ್ಥಾನಕ್ಕೆ 1 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡುತ್ತಾರೆ. ಇದರಿಂದ ದೇವಸ್ಥಾನದ ಆದಾಯ ಹೆಚ್ಚಿದೆ. ಇದರಿಂದ ಕೆಲ ದಿನಗಳ ಹಿಂದೆ ಗ್ರಾಮದ ಸೂರೆಪಲ್ಲಿ ಹುಸೇನ್ ಎಂಬವರು ಈ ದೇವಸ್ಥಾನದ ನಿರ್ವಹಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ದತ್ತಿ ಇಲಾಖೆಗೆ ದೂರು ನೀಡಿದ್ದರು. ಆ ಬಳಿಕ ದತ್ತಿ ಇಲಾಖೆಯು ಆಗಸ್ಟ್ 2 ರಂದು ದೇವಸ್ಥಾನದ ಆಡಳಿತ ಮಂಡಳಿಗೆ ನೋಟಿಸ್ ಕಳುಹಿಸಿ ವಿವರಣೆ ನೀಡುವಂತೆ ಸೂಚಿಸಿತ್ತು. ಒಂದು ವೇಳೆ ವಿವರಣೆ ನೀಡದಿದ್ದರೆ 15 ದಿನಗಳ ನಂತರ ದೇವಸ್ಥಾನವನ್ನು ಸರಕಾರದ ಸ್ವಾಧೀನಕ್ಕೆ ಪಡೆಯಲಾಗುವುದು’ ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಗೆ ಮಾಹಿತಿ ಸಿಕ್ಕಿದಾಗ ಸಮಿತಿಯು ಹಿಂದುತ್ವನಿಷ್ಠ ಸಂಘಟನೆಗಳನ್ನು ಸಂಘಟಿಸಿ ಆಗಸ್ಟ 17 ರಂದು ದತ್ತಿ ಆಯುಕ್ತರಿಗೆ ಮನವಿ ಸಲ್ಲಿಸಿತ್ತು. ಅದರಲ್ಲಿ ‘ಇಲಾಖೆ ಕಳುಹಿಸಿರುವ ನೋಟಿಸ್ ಕಾನೂನಿಗೆ ವಿರುದ್ಧವಾಗಿದ್ದು, ದತ್ತಿ ಇಲಾಖೆಯು ದೇವಸ್ಥಾನವನ್ನು ಸ್ವಾಧೀನ ಪಡಿಸಿಕೊಳ್ಳಲು ಸಾಧ್ಯವಿಲ್ಲ. ಈ ನೋಟಿಸನ್ನು ಹಿಂದೂಗಳು ವಿರೋಧಿಸುತ್ತಾರೆ’ ಎಂದು ತಿಳಿಸಲಾಗಿತ್ತು.

ಆಗಸ್ಟ್ 18 ರಂದು ಹಿಂದೂ ಜನಜಾಗೃತಿ ಸಮಿತಿ ಮತ್ತು ಇತರ ಹಿಂದುತ್ವನಿಷ್ಠ ಸಂಘಟನೆಗಳ ಕಾರ್ಯಕರ್ತರು ಇರಾವರಮ್ ಗ್ರಾಮಕ್ಕೆ ತೆರಳಿ ದೇವಸ್ಥಾನದ ಅಧ್ಯಕ್ಷ ಜಗನ್ನಾಥ ಅವರನ್ನು ಭೇಟಿ ಮಾಡಿ ಯಾವುದೇ ಸಂದರ್ಭದಲ್ಲೂ ದೇವಸ್ಥಾನವನ್ನು ದತ್ತಿ ಇಲಾಖೆಯ ಸ್ವಾಧೀನಕ್ಕೆ ನೀಡಬಾರದು ಎಂದು ಹೇಳಿ, ನಿಮ್ಮೊಂದಿಗೆ ನಾವಿದ್ದೇವೆ,’’ಎಂದು ಭರವಸೆ ನೀಡಿದರು. ಈ ಸಮಯದಲ್ಲಿ ದೇವಾಲಯದ ಟ್ರಸ್ಟ್ ಅನ್ನು ಸ್ಥಾಪಿಸಲಾಯಿತು. ಟ್ರಸ್ಟ್ ದತ್ತಿ ಇಲಾಖೆಗೆ ದೇವಸ್ಥಾನದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು’ ಎಂದು ತಿಳಿಸಿದೆ.
ಸಂಪಾದಕೀಯ ನಿಲುವುಎಷ್ಟು ಹಿಂದೂಗಳು ಮಸೀದಿ ಮತ್ತು ಚರ್ಚ್ ಗಳಲ್ಲಿನ ಅವ್ಯವಸ್ಥೆಯ ಬಗ್ಗೆ ದತ್ತಿ ಇಲಾಖೆಗೆ ದೂರು ನೀಡುತ್ತಾರೆ? ಹಿಂದೂಗಳು ಈಗ ಈ ದೃಷ್ಟಿಯಿಂದ ಪ್ರಯತ್ನಿಸಬೇಕು ಎಂದು ಯಾರಿಗಾದರೂ ಅನಿಸಿದರೆ, ಆಶ್ಚರ್ಯಪಡಬಾರದು ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ