|

ಬೆಂಗಳೂರು – ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ದ ಮಹತ್ವದ ಯೋಜನೆಯಾದ ‘ಚಂದ್ರಯಾನ-3’ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಿತು. ಇದು ಭಾರತದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ಜನರಲ್ಲಿ ಸಂತಸ ಮೂಡಿಸಿದೆ. ಈ ಯಶಸ್ಸಿನೊಂದಿಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ಚಂದ್ರಯಾನ 3 ಯಶಸ್ವಿ
ಚಂದಿರನ ಅಂಗಳದಲ್ಲಿ ಭಾರತ.
ಇಸ್ರೋ ವಿಜ್ಣಾನಿಗಳಿಗೆ ಶತಕೋಟಿ ನಮನಗಳು
ಇದನ್ನೂ ಓದಿ: https://t.co/dQ90N3V7mk#chandrayaan3 #landingchandrayaan3 #kannadaNews #Tv9kannad pic.twitter.com/sIUMrxiIyc
— TV9 Kannada (@tv9kannada) August 23, 2023
ಈ ಹಿಂದೆ ಅಮೆರಿಕ, ರಷ್ಯಾ ಮತ್ತು ಚೀನಾ ಈ ಹಿಂದೆ ಚಂದ್ರನ ಮೇಲೆ ತಮ್ಮ ಬಾಹ್ಯಾಕಾಶ ನೌಕೆಯನ್ನು ಇಳಿಸಿದ್ದರೂ, ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಲು ಸಾಧ್ಯವಾಗಲಿಲ್ಲ. ಇತ್ತೀಚೆಗೆ, ಆಗಸ್ಟ್ 20 ರಂದು, ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸುವ ಪ್ರಯತ್ನದಲ್ಲಿ ರಷ್ಯಾ ವಿಫಲವಾಯಿತು. ಅವರ ಬಾಹ್ಯಾಕಾಶ ನೌಕೆ ‘ಲೂನಾ-25’ ಚಂದ್ರನ ಮೇಲೆ ಅಪ್ಪಳಿಸಿತ್ತು.
ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ #Chandrayaan3 #ISRO #NarendraModi #AsianetNews #AsianetSuvarnaNews pic.twitter.com/pxnNg1pW5u
— Asianet Suvarna News (@AsianetNewsSN) August 23, 2023
ಇದೇ ನೋಡಿ Chandrayaan-3 Mission ಇದರ ಲ್ಯಾಂಡರ್ ಇಳಿಯುವಾಗ ತೆಗೆದ ಚಿತ್ರ
ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ದ ಮಹತ್ವದ ಯೋಜನೆಯಾದ ‘ಚಂದ್ರಯಾನ-3’ (#Chandrayaan_3) ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಿತು. ಈಗ ಇಸ್ರೋ ಅದರ ಅಪಡೇಟ್ ಎಂದು ಲ್ಯಾಂಡರ್ ಇಳಿಯುವಾಗ ತೆಗೆದ ಚಿತ್ರವನ್ನು ಟ್ವೀಟ್ ಮಾಡಿದ್ದು ಅದರ ಅನೇಕ ಜನರಿಂದ ಉತ್ತಮ ಸ್ಪಂದನ ದೊರೆತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಇಸ್ರೋ `CH-3 ಲ್ಯಾಂಡರ್ ಮತ್ತು ಬೆಂಗಳೂರಿನ MOX-ISTRAC ನಡುವೆ ಸಂವಹನ ಸಂಪರ್ಕವನ್ನು ಸ್ಥಾಪಿಸಲಾಗಿದೆ. ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮರಾದಿಂದ ಇಳಿಯುವಾಗ ತೆಗೆದ ಚಿತ್ರಗಳು ಇಲ್ಲಿವೆ’ ಎಂದು ತಿಳಿಸಿ ಚಿತ್ರವನ್ನು ಶೇರ್ ಮಾಡಿದೆ.
Chandrayaan-3 Mission:
Updates:The communication link is established between the Ch-3 Lander and MOX-ISTRAC, Bengaluru.
Here are the images from the Lander Horizontal Velocity Camera taken during the descent. #Chandrayaan_3#Ch3 pic.twitter.com/ctjpxZmbom
— ISRO (@isro) August 23, 2023
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ