|

ಬೆಂಗಳೂರು – ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ದ ಮಹತ್ವದ ಯೋಜನೆಯಾದ ‘ಚಂದ್ರಯಾನ-3’ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಿತು. ಇದು ಭಾರತದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ಜನರಲ್ಲಿ ಸಂತಸ ಮೂಡಿಸಿದೆ. ಈ ಯಶಸ್ಸಿನೊಂದಿಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ಚಂದ್ರಯಾನ 3 ಯಶಸ್ವಿ
ಚಂದಿರನ ಅಂಗಳದಲ್ಲಿ ಭಾರತ.
ಇಸ್ರೋ ವಿಜ್ಣಾನಿಗಳಿಗೆ ಶತಕೋಟಿ ನಮನಗಳು
ಇದನ್ನೂ ಓದಿ: https://t.co/dQ90N3V7mk#chandrayaan3 #landingchandrayaan3 #kannadaNews #Tv9kannad pic.twitter.com/sIUMrxiIyc
— TV9 Kannada (@tv9kannada) August 23, 2023
ಈ ಹಿಂದೆ ಅಮೆರಿಕ, ರಷ್ಯಾ ಮತ್ತು ಚೀನಾ ಈ ಹಿಂದೆ ಚಂದ್ರನ ಮೇಲೆ ತಮ್ಮ ಬಾಹ್ಯಾಕಾಶ ನೌಕೆಯನ್ನು ಇಳಿಸಿದ್ದರೂ, ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಲು ಸಾಧ್ಯವಾಗಲಿಲ್ಲ. ಇತ್ತೀಚೆಗೆ, ಆಗಸ್ಟ್ 20 ರಂದು, ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸುವ ಪ್ರಯತ್ನದಲ್ಲಿ ರಷ್ಯಾ ವಿಫಲವಾಯಿತು. ಅವರ ಬಾಹ್ಯಾಕಾಶ ನೌಕೆ ‘ಲೂನಾ-25’ ಚಂದ್ರನ ಮೇಲೆ ಅಪ್ಪಳಿಸಿತ್ತು.
ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ #Chandrayaan3 #ISRO #NarendraModi #AsianetNews #AsianetSuvarnaNews pic.twitter.com/pxnNg1pW5u
— Asianet Suvarna News (@AsianetNewsSN) August 23, 2023
ಇದೇ ನೋಡಿ Chandrayaan-3 Mission ಇದರ ಲ್ಯಾಂಡರ್ ಇಳಿಯುವಾಗ ತೆಗೆದ ಚಿತ್ರ
ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ದ ಮಹತ್ವದ ಯೋಜನೆಯಾದ ‘ಚಂದ್ರಯಾನ-3’ (#Chandrayaan_3) ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಿತು. ಈಗ ಇಸ್ರೋ ಅದರ ಅಪಡೇಟ್ ಎಂದು ಲ್ಯಾಂಡರ್ ಇಳಿಯುವಾಗ ತೆಗೆದ ಚಿತ್ರವನ್ನು ಟ್ವೀಟ್ ಮಾಡಿದ್ದು ಅದರ ಅನೇಕ ಜನರಿಂದ ಉತ್ತಮ ಸ್ಪಂದನ ದೊರೆತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಇಸ್ರೋ `CH-3 ಲ್ಯಾಂಡರ್ ಮತ್ತು ಬೆಂಗಳೂರಿನ MOX-ISTRAC ನಡುವೆ ಸಂವಹನ ಸಂಪರ್ಕವನ್ನು ಸ್ಥಾಪಿಸಲಾಗಿದೆ. ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮರಾದಿಂದ ಇಳಿಯುವಾಗ ತೆಗೆದ ಚಿತ್ರಗಳು ಇಲ್ಲಿವೆ’ ಎಂದು ತಿಳಿಸಿ ಚಿತ್ರವನ್ನು ಶೇರ್ ಮಾಡಿದೆ.
Chandrayaan-3 Mission:
Updates:The communication link is established between the Ch-3 Lander and MOX-ISTRAC, Bengaluru.
Here are the images from the Lander Horizontal Velocity Camera taken during the descent. #Chandrayaan_3#Ch3 pic.twitter.com/ctjpxZmbom
— ISRO (@isro) August 23, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ