
ಶಿಮ್ಲಾ (ಹಿಮಾಚಲ ಪ್ರದೇಶ) – ರಾಜ್ಯದ ಕುಲ್ಲು ಜಿಲ್ಲೆಯ ಅನಿಯಲ್ಲಿ ಆಗಸ್ಟ್ 24 ರಂದು 5 ಕ್ಕೂ ಹೆಚ್ಚು ಕಟ್ಟಡಗಳು ಕುಸಿದಿವೆ. ಅಧಿಕಾರಿಗಳು ಮೊದಲೇ ಜನರನ್ನು ಸ್ಥಳಾಂತರಿಸಿದ್ದರಿಂದ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅನಿ ಬಸ್ ನಿಲ್ದಾಣದ ಬಳಿ ಇನ್ನೂ 2 ರಿಂದ 3 ಕಟ್ಟಡಗಳು ಕುಸಿಯುವ ಅಪಾಯವಿದೆ ಎನ್ನಲಾಗುತ್ತಿದೆ.
Himachal: Several houses collapse as massive landslide hits Kullu district
Read @ANI Story | https://t.co/L3UvCrD364#HimachalPradesh #landslide #IMD pic.twitter.com/wfKZSnn1Em
— ANI Digital (@ani_digital) August 24, 2023
1. ಅನಿಯ ಆಡಳಿತಾಧಿಕಾರಿ ನರೇಶ್ ವರ್ಮಾ ಇವರ ನೇತೃತ್ವದಲ್ಲಿ ಸ್ಥಳೀಯ ಆಡಳಿತವು ಘಟನಾ ಸ್ಥಳಕ್ಕೆ ಆಗಮಿಸಿ ಹಾನಿಯ ಪರಿಶೀಲನೆ ನಡೆಸುತ್ತಿದೆ.
2. ಕುಸಿದಿರುವ ಕಟ್ಟಡಗಳ ಸಂಖ್ಯೆ 7 ರಿಂದ 8 ಇರಬಹುದು ಎಂದು ಅಂದಾಜಿಸಲಾಗಿದೆ.
3. ಜುಲೈ 7 ರಿಂದ 11 ರವರೆಗೆ ಸುರಿದ ಧಾರಾಕಾರ ಮಳೆಗೆ ಈ ಕಟ್ಟಡಗಳು ಬಿರುಕು ಬಿಡಲಾರಂಭಿಸಿವೆ. ಈ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಆಡಳಿತವು ಮೊದಲೇ ಜಾಗವನ್ನು ಖಾಲಿ ಮಾಡುವಂತೆ ಕೇಳಿಕೊಂಡಿದೆ ಮತ್ತು ಕಟ್ಟಡ ಮಾಲೀಕರಿಗೆ ತೆರವು ನೋಟಿಸ್ ನೀಡಿತ್ತು.
4. ಕಟ್ಟಡಗಳ ಕುಸಿತದಿಂದ ಆನಿ ನಾಗರಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸಂಪಾದಕೀಯ ನಿಲುವುಹಿಮಾಚಲ ಪ್ರದೇಶದಲ್ಲಿ ಪ್ರತಿ ವರ್ಷ ಧಾರಾಕಾರ ಮಳೆ ಇರುತ್ತದೆ; ಆದರೆ ಈ ವರ್ಷ ಮನೆ, ಕಟ್ಟಡ ಕುಸಿತದ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಇದರ ಹಿಂದೆ ಬೆಟ್ಟಗಳ ಮೇಲೆ ಮನಸೋ ಇಚ್ಛೆ ಕಟ್ಟಡಗಳು ನಿರ್ಮಾಣವಾಗುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಇದೆಲ್ಲದರ ಪರಿಣಾಮವಾಗಿ ಪ್ರಾಣಹಾನಿ ಮತ್ತು ಧನಹಾನಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !