
ಶಿಮ್ಲಾ (ಹಿಮಾಚಲ ಪ್ರದೇಶ) – ರಾಜ್ಯದ ಕುಲ್ಲು ಜಿಲ್ಲೆಯ ಅನಿಯಲ್ಲಿ ಆಗಸ್ಟ್ 24 ರಂದು 5 ಕ್ಕೂ ಹೆಚ್ಚು ಕಟ್ಟಡಗಳು ಕುಸಿದಿವೆ. ಅಧಿಕಾರಿಗಳು ಮೊದಲೇ ಜನರನ್ನು ಸ್ಥಳಾಂತರಿಸಿದ್ದರಿಂದ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅನಿ ಬಸ್ ನಿಲ್ದಾಣದ ಬಳಿ ಇನ್ನೂ 2 ರಿಂದ 3 ಕಟ್ಟಡಗಳು ಕುಸಿಯುವ ಅಪಾಯವಿದೆ ಎನ್ನಲಾಗುತ್ತಿದೆ.
Himachal: Several houses collapse as massive landslide hits Kullu district
Read @ANI Story | https://t.co/L3UvCrD364#HimachalPradesh #landslide #IMD pic.twitter.com/wfKZSnn1Em
— ANI Digital (@ani_digital) August 24, 2023
1. ಅನಿಯ ಆಡಳಿತಾಧಿಕಾರಿ ನರೇಶ್ ವರ್ಮಾ ಇವರ ನೇತೃತ್ವದಲ್ಲಿ ಸ್ಥಳೀಯ ಆಡಳಿತವು ಘಟನಾ ಸ್ಥಳಕ್ಕೆ ಆಗಮಿಸಿ ಹಾನಿಯ ಪರಿಶೀಲನೆ ನಡೆಸುತ್ತಿದೆ.
2. ಕುಸಿದಿರುವ ಕಟ್ಟಡಗಳ ಸಂಖ್ಯೆ 7 ರಿಂದ 8 ಇರಬಹುದು ಎಂದು ಅಂದಾಜಿಸಲಾಗಿದೆ.
3. ಜುಲೈ 7 ರಿಂದ 11 ರವರೆಗೆ ಸುರಿದ ಧಾರಾಕಾರ ಮಳೆಗೆ ಈ ಕಟ್ಟಡಗಳು ಬಿರುಕು ಬಿಡಲಾರಂಭಿಸಿವೆ. ಈ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಆಡಳಿತವು ಮೊದಲೇ ಜಾಗವನ್ನು ಖಾಲಿ ಮಾಡುವಂತೆ ಕೇಳಿಕೊಂಡಿದೆ ಮತ್ತು ಕಟ್ಟಡ ಮಾಲೀಕರಿಗೆ ತೆರವು ನೋಟಿಸ್ ನೀಡಿತ್ತು.
4. ಕಟ್ಟಡಗಳ ಕುಸಿತದಿಂದ ಆನಿ ನಾಗರಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸಂಪಾದಕೀಯ ನಿಲುವುಹಿಮಾಚಲ ಪ್ರದೇಶದಲ್ಲಿ ಪ್ರತಿ ವರ್ಷ ಧಾರಾಕಾರ ಮಳೆ ಇರುತ್ತದೆ; ಆದರೆ ಈ ವರ್ಷ ಮನೆ, ಕಟ್ಟಡ ಕುಸಿತದ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಇದರ ಹಿಂದೆ ಬೆಟ್ಟಗಳ ಮೇಲೆ ಮನಸೋ ಇಚ್ಛೆ ಕಟ್ಟಡಗಳು ನಿರ್ಮಾಣವಾಗುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಇದೆಲ್ಲದರ ಪರಿಣಾಮವಾಗಿ ಪ್ರಾಣಹಾನಿ ಮತ್ತು ಧನಹಾನಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ