|

ನೂಹ್ (ಹರಿಯಾಣ) – ಇಲ್ಲಿ ವಿಶ್ವ ಹಿಂದೂ ಪರಿಷತ್ ಆಗಸ್ಟ್ 28 ರಂದು ‘ಬ್ರಿಜಮಂಡಲ ಜಲಾಭಿಷೇಕ ಯಾತ್ರೆ’ ನಡೆಸುವುದಾಗಿ ಈಗಾಗಲೇ ಘೋಷಿಸಿದೆ. ಅದಕ್ಕೂ ಮೊದಲು ಇಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಕರ್ಫ್ಯೂ ವಿಧಿಸಲಾಗಿದೆ, ಹಿಂದಿನ ಯಾತ್ರೆಯಲ್ಲಿ ಮತಾಂಧ ಮುಸ್ಲಿಮರು ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹರಿಯಾಣಾ ಸರಕಾರದಿಂದ ಯಾತ್ರೆಗೆ ಇನ್ನೂ ಅನುಮತಿ ನೀಡಿಲ್ಲ; ಆದರೆ ಯಾತ್ರೆ ಕೈಗೊಳ್ಳಲು ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ ಘೋಷಿಸಿದೆ. ಇದೇ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಕೂಡ ‘ಯಾತ್ರೆ ನಡೆಸಲಾಗುವುದು’ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಾತನಾಡುತ್ತಾ, ಈ ಹಿಂದೆ ನೂಹ್ ನಲ್ಲಿ ನಡೆದ ಹಿಂಸಾಚಾರದ ನಂತರ ಇಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರಕಾರದ ಕರ್ತವ್ಯವಾಗಿದೆ ಆದ್ದರಿಂದ ಭಕ್ತರು ಇಲ್ಲಿ ಯಾತ್ರೆ ನಡೆಸುವ ಬದಲು ಸ್ಥಳೀಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.
Vishwa Hindu Parishad to go ahead with its ‘Jal Abhishek Yatra’ in Nuh, says permission not neededhttps://t.co/9XUcio0ywX
— OpIndia.com (@OpIndia_com) August 27, 2023
ಪೊಲೀಸರು ರಾಜ್ಯದ ಗಡಿಯಲ್ಲಿ ಯಾತ್ರಾರ್ಥಿಗಳನ್ನು ತಡೆಯಲು ಬ್ಯಾರಿಕೇಡ್ ಗಳನ್ನು ಹಾಕಿದ್ದಾರೆ. ಇದಲ್ಲದೇ ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಲಾಗುತ್ತಿದೆಯೇ? ಎನ್ನುವ ಬಗ್ಗೆಯೂ ನಿಗಾ ವಹಿಸಲಾಗಿದೆ.
ಪ್ರತಿ ಜಿಲ್ಲೆಯಲ್ಲಿ ಬಜರಂಗ ದಳ ಮತ್ತು ವಿಶ್ವಹಿಂದೂ ಪರಿಷತ್ತು ಯಾತ್ರೆ ನಡೆಸಲಿದೆ
ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ತು ಹರಿಯಾಣ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಜಲಾಭಿಷೇಕ ಯಾತ್ರೆ ನಡೆಸುವುದಾಗಿ ಘೋಷಿಸಿದೆ. ಇದರಲ್ಲಿ ನೂಹ ಕೂಡ ಸೇರಿದೆ. ಈ ಸಂಘಟನೆಗಳು ‘ನೂಹನ ನಲ್ಹಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಬದಲು ಸ್ಥಳೀಯ ಸ್ಥಳಗಳಲ್ಲಿ ಯಾತ್ರೆ ನಡೆಸಬೇಕು’ ಎಂದು ತಮ್ಮ ಕಾರ್ಯಕರ್ತರಿಗೆ ಮನವಿ ಮಾಡಿವೆ.
ಸಂಪಾದಕೀಯ ನಿಲುವುಹರಿಯಾಣದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ಧಾರ್ಮಿಕ ಯಾತ್ರೆಯ ಮೇಲೆ ದಾಳಿ ನಡೆಯಿತು ಮತ್ತು ಪುನಃ ಹಿಂದೂಗಳು ಯಾತ್ರೆ ಕೈಗೊಂಡಾಗ ಅವರಿಗೆ ಅನುಮತಿ ನಿರಾಕರಿಸಲಾಗುತ್ತದೆ, ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed