ಮುಖ್ಯ ನ್ಯಾಯಮೂರ್ತಿಗಳ ನಿವಾಸದಲ್ಲಿಯೇ ವಿಚಾರಣೆ !

ಪ್ರಯಾಗರಾಜ (ಉತ್ತರ ಪ್ರದೇಶ) – ಅಯೋಧ್ಯೆಯಲ್ಲಿ ಸರಯು ಎಕ್ಸ್ ಪ್ರೆಸ್ ನಲ್ಲಿ ಓರ್ವ ಮಹಿಳಾ ಪೊಲೀಸ ರಕ್ತದ ಮಡುವಿನಲ್ಲಿ ಬಿದ್ದಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಬಳಿಕ, ಅಲಹಾಬಾದ್ ಉಚ್ಚನ್ಯಾಯಾಲಯವು ತಾನೇ ಮುಂದಾಗಿ ಮೊಕದ್ದಮೆ ದಾಖಲಿಸಿಕೊಂಡು, ಸೆಪ್ಟೆಂಬರ್ 3 ರಂದು ರಾತ್ರಿ 9 ಗಂಟೆಗೆ ವಿಶೇಷ ಪೀಠವನ್ನು ರಚಿಸಿ, ಸರಕಾರಿ ನಿವಾಸದಲ್ಲಿಯೇ ವಿಚಾರಣೆ ನಡೆಸಿತು. ಖಂಡಪೀಠವು ಸೆಪ್ಟೆಂಬರ್ 4 ರಂದು ಉತ್ತರ ಪ್ರದೇಶ ಸರಕಾರ ಮತ್ತು ರೈಲ್ವೆ ಪೊಲೀಸರಿಗೆ ಉತ್ತರ ನೀಡುವಂತೆ ಆದೇಶಿಸಿತ್ತು. ಸರಕಾರಿ ನ್ಯಾಯವಾದಿ ಎ.ಕೆ. ಸ್ಯಾಂಡ ಇವರಿಂದ ಈವರೆಗೆ ಕೈಗೊಂಡ ಕ್ರಮಗಳ ವಿವರಗಳನ್ನು ಕೋರಿದ್ದು, ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಅದರಂತೆ ಸೆಪ್ಟೆಂಬರ 4ರಂದು ನ್ಯಾಯಾಲಯದ ವಿಚಾರಣೆ ವೇಳೆ ಇಬ್ಬರೂ ಉತ್ತರ ನೀಡಿದ್ದರು. ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 13 ರಂದು ನಡೆಯಲಿದೆ.
ಈ ಮಹಿಳಾ ಪೊಲೀಸ್ ಸೊಂಟದ ಕೆಳಗೆ ಬಟ್ಟೆ ಇರಲಿಲ್ಲ. ಅವಳ ಮುಖಕ್ಕೆ ಚಾಕುವಿನಿಂದ ಇರಿದಂತೆ ಕಾಣಿಸುತ್ತಿತ್ತು. ಈ ಘಟನೆ ಆಗಸ್ಟ್ 30 ರಂದು ನಡೆದಿದೆ. ಅಧಿಕ ರಕ್ತಸ್ರಾವದಿಂದ ಮಹಿಳಾ ಪೊಲೀಸ್ ಸ್ಥಿತಿ ಚಿಂತಾಜನಕವಾಗಿದೆ. ಸದ್ಯಕ್ಕೆ ಅವರಿಗೆ ಲಕ್ಷ್ಮಣಪುರಿ ಕೆ.ಜಿ.ಎಂ.ಯು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಲಾಗಿದೆ.
Allahabad HC Initiates Suo Motu PIL Over Brutal Attack On On-Duty Female Police Officer Inside #SaryuExpress
The woman cop was found in a deplorable state in a pool of blood, unable to move, by some passengers, who boarded Saryu Express from Ayodhya Junction at about 4:00 am…
— LawBeat (@LawBeatInd) September 4, 2023
ಸಂಪಾದಕರ ನಿಲುವು* ಇಂತಹ ಸೂಕ್ಷ್ಮ ಮತ್ತು ತತ್ಪರತೆಯನ್ನು ಜನರು ನಿರೀಕ್ಷಿಸುತ್ತಾರೆ ಎಂದು ಯಾರಾದರೂ ಹೇಳಿದರೆ ತಪ್ಪಾಗಲಾರದು ! |
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ