ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ ಮತ್ತು ಕಣ್ಣುಗಳನ್ನು ಕಿತ್ತು ಹಾಕುತ್ತೇವೆ ! – ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಇವರ ಎಚ್ಚರಿಕೆ !

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ನವ ದೆಹಲಿ – ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತು ಹೊರಗೆ ತೆಗೆಯುತ್ತೇವೆ. ಸನಾತನವನ್ನು ವಕ್ರದೃಷ್ಟಿಯಿಂದ ನೋಡುವವರ ಕಣ್ಣು ಕಿತ್ತು ಹೊರಗೆ ತೆಗೆಯುತ್ತೇವೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಇವರು ಒಂದು ಸಭೆಯಲ್ಲಿ ಎಚ್ಚರಿಕೆ ನೀಡಿದರು.

ಶೇಖಾವತ್ ತಮ್ಮ ಮಾತನ್ನು ಮುಂದುವರಿಸಿ, ಸನಾತನದ ವಿರುದ್ಧ ಮಾತನಾಡುವ ಯಾವುದೇ ವ್ಯಕ್ತಿ ಈ ದೇಶದಲ್ಲಿ ತನ್ನ ರಾಜಕೀಯ ಶಕ್ತಿಯನ್ನು ಶಾಶ್ವತವಾಗಿ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಈ ದೇಶದ ಮೇಲೆ ಅನೇಕ ಸಂಕಟಗಳು ಬಂದೆರಗಿದವು; ಭಾರತದ ವೈಭವ ಮತ್ತು ಆಸ್ತಿಗಳನ್ನು ಲೂಟಿ ಮಾಡಲು ಹಲವಾರು ಆಕ್ರಮಣಗಳು ನಡೆದವು, ಅನೇಕ ಜನರು ಈ ದೇಶದ ಸಂಸ್ಕೃತಿಯನ್ನು ನಾಶಮಾಡಲು ಪ್ರಯತ್ನಿಸಿದರು. ಸನಾತನ ಧರ್ಮವನ್ನು ನಾಶಮಾಡಲು ನಮ್ಮ ಮೇಲೆ 1 ಸಾವಿರ ವರ್ಷಗಳ ಕಾಲ ನಿರಂತರವಾಗಿ ಆಕ್ರಮಣಗಳು ನಡೆದವು; ಆದರೆ ನಮ್ಮ ಪೂರ್ವಜರು ಸಮರ್ಥರಾಗಿದ್ದರು, ಅವರು ತಮ್ಮ ಸ್ವಂತ ಶಕ್ತಿಯಿಂದ ಭಾರತದ ಸಂಸ್ಕೃತಿ ಮತ್ತು ಸನಾತನ ಧರ್ಮವನ್ನು ರಕ್ಷಿಸಿದರು. ಇಂದು ಪುನಃ ಕೆಲವರು ಸನಾತನ ಧರ್ಮವನ್ನು ಅಂತ್ಯಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಸನಾತನ ಧರ್ಮದ ವಿರುದ್ಧ ಮಾತನಾಡುವವರನ್ನು ತೀವ್ರವಾಗಿ ವಿರೋಧಿಸಬೇಕು ಎಂದು ಹೇಳಿದರು.