ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. ೩೩ ರಷ್ಟು ಮೀಸಲಾತಿ ನೀಡುವ ಮಸೂದೆ ಮಂಡನೆ

ನವ ದೆಹಲಿ – ಎಲ್ಲ ಸಂಸದರು ಹಳೆಯ ಸಂಸತ್ ಭವನದಿಂದ ಕಾಲ್ನಡಿಗೆ ಮೂಲಕ ನೂತನ ಸಂಸತ್ ಭವನಕ್ಕೆ ತಲುಪಿದ ಬಳಿಕ ಪ್ರಧಾನಮಂತ್ರಿ ಮೋದಿಯವರು ಎಲ್ಲರಿಗೂ ಮಾರ್ಗದರ್ಶನ ಮಾಡಿದನಂತರ ಕಾರ್ಯಕಲಾಪ ಆರಂಭವಾಯಿತು. ಈ ಸಮಯದಲ್ಲಿ ಕಾನೂನು ಸಚಿವ ಅರ್ಜುನ ಮೇಘವಾಲ್ ಇವರು ಲೋಕಸಭೆಯಲ್ಲಿ ೧೨೮ ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ‘ನಾರೀ ಶಕ್ತಿ ವಂದನ’ ಈ ಹೆಸರಿನಲ್ಲಿ ಮಂಡಿಸಲಾದ ಮಸೂದೆಯಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗಾಗಿ ಮಹಿಳೆಯರಿಗೆ ಶೇ. ೩೩ ರಷ್ಟು ಸೀಟುಗಳನ್ನು ಮೀಸಲಿಡಲು ಅವಕಾಶ ನೀಡುತ್ತಿದೆ. ಈ ಮಸೂದೆಯ ಬಗ್ಗೆ ಇಂದು ಚರ್ಚೆ ನಡೆಯಲಿದೆ. ಈ ಮಸೂದೆ ಅಂಗೀಕರಿಸಿದನಂತರ ಲೋಕಸಭೆಯಲ್ಲಿ ಮಹಿಳೆಯರ ಸಂಖ್ಯೆ ೧೮೧ ಆಗಲಿದೆ. ಪ್ರಸ್ತುತ ಲೋಕಸಭೆಯಲ್ಲಿ ೮೨ ಸಂಸದರಿದ್ದಾರೆ. ಈ ಅಧಿವೇಶನದಲ್ಲಿ ಈ ಮಸೂದೆಯನ್ನು ಅಂಗೀಕರಿಸಿದರೂ ೨೦೨೪ ರ ಚುನಾವಣೆಯಲ್ಲಿ ಇದು ಜಾರಿಗೆ ಬರುವ ಸಾಧ್ಯವಿಲ್ಲವೆಂದು ತಜ್ಞರು ಹೇಳುತ್ತಿದ್ದಾರೆ; ಏಕೆಂದರೆ ಗಡಿರೇಖೆಯ ಪ್ರಕಾರ ಇದನ್ನು ಜಾರಿಗೊಳಿಸಬಹುದು. ಜನಗಣನೆಯ ನಂತರವೇ ಗಡಿರೇಖೆಯನ್ನು ಮಾಡಲಾಗುವುದು. ಈ ಎರಡು ಚುನಾವಣೆಗಳ ಮೊದಲು ಸಾಧ್ಯವಿಲ್ಲ.
#WATCH | Proceedings of the Lok Sabha begin in the New Parliament building. pic.twitter.com/LafXM9xUD9
— ANI (@ANI) September 19, 2023
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ