ಕೆನಡಾದ ವಿರೋಧ ಪಕ್ಷದ ನಾಯಕ ಪಿಯರ್ ಪೊಲಿವರೆಯಿಂದ ಹಿಂದೂಗಳಿಗೆ ಬೆಂಬಲ ! – ಹಿಂದೂಗಳು ಕೆನಡಾದ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ

ಹಿಂದೂಗಳು ಕೆನಡಾದ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರಮುಖ ಕೊಡುಗೆಯನ್ನು ನೀಡಿದ್ದರಿಂದ ಅವರಿಗೆ ಯಾವಾಗಲೂ ಸ್ವಾಗತ !

ಕೆನಡಾದ ವಿರೋಧ ಪಕ್ಷದ ನಾಯಕ ಪಿಯರ್ ಪೊಲಿವರೆ

ಒಟಾವಾ (ಕೆನಡಾ) – ಕೆನಡಾದ ಪ್ರತಿಯೊಬ್ಬ ಪ್ರಜೆಯು ದೇಶದಲ್ಲಿ ಯಾವುದೇ ಭಯವಿಲ್ಲದೆ ವಾಸಿಸುವ ಹಕ್ಕನ್ನು ಹೊಂದಿದ್ದಾರೆ ಮತ್ತು ಪ್ರತಿ ಸಮುದಾಯವು ಈ ದೇಶದಲ್ಲಿ ಸ್ವಾಗತಿಸುತ್ತದೆ. ನಾವು ಇತ್ತೀಚೆಗೆ ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಕೇಳಿದ್ದೇವೆ ಮತ್ತು ನಾವು ಅವುಗಳನ್ನು ವಿರೋಧಿಸುತ್ತೇವೆ. ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ಹಿಂದೂಗಳು ಮಹತ್ವದ ಕೊಡುಗೆ ನೀಡಿದ್ದಾರೆ. ಕೆನಡಾದ ವಿರೋಧಿ ಪಕ್ಷದ ನಾಯಕ ಪಿಯರೆ ಪೊಲಿವರೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನಲ್ಲಿ ಹಿಂದೂಗಳನ್ನು ಬೆಂಬಲಿಸಿದ್ದಾರೆ, ಈ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನು ಕೆನಡಾದಲ್ಲಿರುವ ಹಿಂದೂಗಳಿಗೆ ದೇಶ ತೊರೆಯುವಂತೆ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಪೊಲಿವರೆ ಇವರು ಈ ಹೇಳಿಕೆ ನೀಡಿದ್ದಾರೆ. ಪೊಲಿವರೆ ಈ ಹಿಂದೆ ಟ್ರುಡೊರವರು ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್‌ನನ್ನು ಭಾರತ ಕೊಂದಿದೆ ಎಂದು ಆರೋಪಿಸಿದಾಗ ಯಾವುದೇ ಪುರಾವೆಗಳನ್ನು ಪ್ರಸ್ತುತಪಡಿಸಲಿಲ್ಲ ಎಂದು ಟೀಕಿಸಿದ್ದರು.