ಲಕ್ಷ್ಮಿಪೂಜೆ (ಅಕ್ಟೋಬರ್ ೨೪)
ಈ ದಿನ ‘ಪ್ರಾತಃಕಾಲದಲ್ಲಿ ಮಂಗಲಸ್ನಾನ ಮಾಡಿ ದೇವರ ಪೂಜೆ, ಮಧ್ಯಾಹ್ನ ಪಾರ್ವಣಶ್ರಾದ್ಧ ಹಾಗೂ ಬ್ರಾಹ್ಮಣಭೋಜನ ಮತ್ತು ಪ್ರದೋಷಕಾಲದಲ್ಲಿ ಎಲೆ-ಬಳ್ಳಿಗಳಿಂದ ಶೃಂಗರಿಸಿದ ಮಂಟಪದಲ್ಲಿ ಲಕ್ಷ್ಮಿ, ಶ್ರೀವಿಷ್ಣು ಮುಂತಾದ ದೇವತೆಗಳು ಮತ್ತು ಕುಬೇರನ ಪೂಜೆ ಮಾಡುತ್ತಾರೆ.
ಈ ದಿನ ‘ಪ್ರಾತಃಕಾಲದಲ್ಲಿ ಮಂಗಲಸ್ನಾನ ಮಾಡಿ ದೇವರ ಪೂಜೆ, ಮಧ್ಯಾಹ್ನ ಪಾರ್ವಣಶ್ರಾದ್ಧ ಹಾಗೂ ಬ್ರಾಹ್ಮಣಭೋಜನ ಮತ್ತು ಪ್ರದೋಷಕಾಲದಲ್ಲಿ ಎಲೆ-ಬಳ್ಳಿಗಳಿಂದ ಶೃಂಗರಿಸಿದ ಮಂಟಪದಲ್ಲಿ ಲಕ್ಷ್ಮಿ, ಶ್ರೀವಿಷ್ಣು ಮುಂತಾದ ದೇವತೆಗಳು ಮತ್ತು ಕುಬೇರನ ಪೂಜೆ ಮಾಡುತ್ತಾರೆ.
ಆಕಾಶದಲ್ಲಿ ನಕ್ಷತ್ರಗಳಿರುವಾಗ ಬ್ರಾಹ್ಮೀ ಮುಹೂರ್ತದಲ್ಲಿ ಅಭ್ಯಂಗ ಸ್ನಾನವನ್ನು ಮಾಡುತ್ತಾರೆ. ಉತ್ತರಣೆಯ ಗೆಲ್ಲಿನಿಂದ ತಲೆಯಿಂದ ಕಾಲುಗಳ ವರೆಗೆ ಮತ್ತು ಪುನಃ ಕಾಲುಗಳಿಂದ ತಲೆಯ ವರೆಗೆ ನೀರನ್ನು ಸಿಂಪಡಿಸಿಕೊಳ್ಳುತ್ತಾರೆ. ಇದಕ್ಕಾಗಿ ಬೇರಿರುವ ಉತ್ತರಣೆಯನ್ನು ಉಪಯೋಗಿಸುತ್ತಾರೆ.
ಈ ದಿನ ಯಮನು ತನ್ನ ತಂಗಿ ಯಮುನೆಯ ಮನೆಗೆ ಭೋಜನಕ್ಕೆ ಹೋಗಿದ್ದನು; ಆದುದರಿಂದ ಈ ದಿನಕ್ಕೆ ಯಮದ್ವಿತೀಯಾ ಎನ್ನುವ ಹೆಸರು ಬಂದಿದೆ.
ಧನತ್ರಯೋದಶಿಯ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯ ವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆ-ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ.
ಹೊಸ ವರ್ಷದ ಲೆಕ್ಕದ ಖಾತೆ ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ. ವಾಸ್ತವದಲ್ಲಿ ಲಕ್ಷ್ಮಿ ಪೂಜೆಯ ವೇಳೆ ಇಡೀ ವರ್ಷದ ಜಮಾಖರ್ಚನ್ನು ಕೊಡುವುದಿರುತ್ತದೆ. ಜಮೆ-ಖರ್ಚಿನ ಬಗ್ಗೆ ವರದಿಯನ್ನಿಟ್ಟು ಲಕ್ಷ್ಮಿಯ ಪೂಜೆ ಮಾಡುತ್ತಾರೆ.
ದೀಪಾವಳಿ ಹಾಗೂ ಇತರ ಧಾರ್ಮಿಕ ಹಬ್ಬ ಮತ್ತು ಸಮಾರಂಭದಲ್ಲಿ ನೀಲಾಂಜನ ಹಾಗೂ ಕಾಲುದೀಪ ಇವುಗಳ ಸ್ಥಾನಕ್ಕೆ ಅಸಾಧಾರಣ ಮಹತ್ವವಿದೆ. ಸಹೋದರಬಿದಿಗೆ ಅಥವಾ ಇತರ ಸಮಯದಲ್ಲಿ ನೀಲಾಂಜನದಿಂದ ಬೆಳಗುವುದು ಪ್ರಾಚೀನ ಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.
ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂಕಾಲ ಕರು ಸಮೇತವಿರುವ ಆಕಳ ಪೂಜೆಯನ್ನು ಮಾಡುತ್ತಾರೆ.
ಕೆಲವೊಮ್ಮೆ ಅನೇಕ ಪುಣ್ಯಾತ್ಮಗಳು ಯಾವುದಾದರೊಂದು ಕ್ಷೇತ್ರದಲ್ಲಿ ಸೂಕ್ಷ್ಮದಿಂದ ತಪಸ್ಸು ಮಾಡುತ್ತಿರುತ್ತಾರೆ. ಪಟಾಕಿಗಳನ್ನು ಸಿಡಿಸುವುದರಿಂದ ವಾತಾವರಣದಲ್ಲಿನ ಚೈತನ್ಯವು ಕಡಿಮೆಯಾಗಿ ಅವರ ತಪಃಸಾಧನೆಗೆ ಅಡ್ಡಿಯಾಗುತ್ತದೆ. ಅವರೂ ಆ ವ್ಯಕ್ತಿಗೆ ಶಾಪವನ್ನು ಕೊಟ್ಟು ಬೇರೆ ಸ್ಥಾನವನ್ನು ಹುಡುಕಲು ಅಲ್ಲಿಂದ ಹೊರಟು ಹೋಗುತ್ತಾರೆ.
ವಾತಾವರಣದಲ್ಲಿರುವ ಕನಿಷ್ಠ ಕೆಟ್ಟ ಶಕ್ತಿಗಳು ವಾಯುಮಂಡಲದಲ್ಲಿ ಗತಿಮಾನವಾಗಿ ಪೂರ್ಣ ವಾತಾವರಣದಲ್ಲಿ ನೈಸರ್ಗಿಕ ಕ್ಷಮತೆಯನ್ನು ಹೀರಿಕೊಳ್ಳುತ್ತವೆ. ವಾತಾವರಣದಲ್ಲಿ ರಜ-ತಮದಿಂದ ತುಂಬಿ ಮತ್ತು ಸ್ಮಶಾನದಂತೆ ತೊಂದರೆದಾಯಕವಾಗುತ್ತದೆ.
ದೀಪಾವಳಿಯ ಸಮಯದಲ್ಲಿ ಬಹಳಷ್ಟು ಪ್ರಮಾಣದಲ್ಲಿ ದೇವತೆಗಳ ಚಿತ್ರ ಅಥವಾ ಹೆಸರುಗಳಿರುವ ಲಾಟರಿ ಟಿಕೇಟುಗಳ ಮಾರಾಟವಾಗುತ್ತಿರುತ್ತದೆ. ಹೆಚ್ಚಿನ ಜನರು ಲಾಟರಿ ಟಿಕೇಟುಗಳನ್ನು ಉಪಯೋಗಿಸಿದ ನಂತರ ಅವುಗಳನ್ನು ಮುದ್ದೆ ಮಾಡಿ ಕಸದಲ್ಲಿ ಎಸೆದುಬಿಡುತ್ತಾರೆ.