ಗಣಪತಿಗೆ ಮಾಡಬೇಕಾದ ಪ್ರಾರ್ಥನೆ
ಹೇ ಬುದ್ಧಿದಾತಾ, ಶ್ರೀ ಗಣೇಶಾ, ನನಗೆ ಸದ್ಬುದ್ಧಿಯನ್ನು ಪ್ರಧಾನಿಸು. ಹೇ ವಿಘ್ನಹರ್ತಾ, ನನ್ನ ಜೀವನದಲ್ಲಿ ಬರುವ ಸಂಕಟಗಳನ್ನು ನಿವಾರಿಸು. ದಿನವಿಡೀ ಉತ್ಸಾಹದಿಂದ ಕೆಲಸ-ಕಾರ್ಯಗಳನ್ನು ಮಾಡಲು ನನಗೆ ಅವಶ್ಯಕವಿದ್ದಷ್ಟು ಪ್ರಾಣಶಕ್ತಿಯನ್ನು ನೀಡು.
ಹೇ ಬುದ್ಧಿದಾತಾ, ಶ್ರೀ ಗಣೇಶಾ, ನನಗೆ ಸದ್ಬುದ್ಧಿಯನ್ನು ಪ್ರಧಾನಿಸು. ಹೇ ವಿಘ್ನಹರ್ತಾ, ನನ್ನ ಜೀವನದಲ್ಲಿ ಬರುವ ಸಂಕಟಗಳನ್ನು ನಿವಾರಿಸು. ದಿನವಿಡೀ ಉತ್ಸಾಹದಿಂದ ಕೆಲಸ-ಕಾರ್ಯಗಳನ್ನು ಮಾಡಲು ನನಗೆ ಅವಶ್ಯಕವಿದ್ದಷ್ಟು ಪ್ರಾಣಶಕ್ತಿಯನ್ನು ನೀಡು.
ಶ್ರೀ ಗಣೇಶ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಿಂದ ಉತ್ತರ ಪೂಜೆಯ ವರೆಗಿನ ಎಲ್ಲ ವಿಧಿಗಳನ್ನು ಯೋಗ್ಯ ರೀತಿಯಲ್ಲಿ ಹೇಗೆ ಮಾಡಬೇಕು, ಗಣೇಶ ಪೂಜೆಗಾಗಿ ಯಾವ ವಸ್ತುಗಳು ಎಷ್ಟು ಪ್ರಮಾಣದಲ್ಲಿರಬೇಕು, ಎಂಬ ಕುರಿತು ವಿವೇಚನೆಯನ್ನು ಈ ಕಿರುಗ್ರಂಥದಲ್ಲಿ ಅರ್ಥಸಹಿತ ಕೊಡಲಾಗಿದೆ.
“ನಾವು ಶ್ರೀ ಗಣೇಶಮೂರ್ತಿಯಲ್ಲಿ ಹೆಚ್ಚೆಚ್ಚು ಗಣೇಶತತ್ತ್ವವು ಬರಲು ಪ್ರಯತ್ನಿಸುತ್ತಿದ್ದೇವೆ. ದೇವಸ್ಥಾನದಲ್ಲಿ ಇಂತಹ ಮೂರ್ತಿಗಳನ್ನು ಇಟ್ಟರೆ ಸಮಾಜದಲ್ಲಿನ ಜನರಿಗೆ ದೈವತ್ವದ ಲಾಭವಾಗಲಿದೆ. ಆ ದೃಷ್ಟಿಯಿಂದ ದುರ್ಗಾದೇವಿಯ ಮೂರ್ತಿ ತಯಾರಿಕೆಯು ಪ್ರಾರಂಭವಾಗಿದೆ.” ಎಂದು ಹೇಳಿದರು.
ಮೂರ್ತಿಯನ್ನು ತರುವಾಗ ಅದರ ಮೇಲೆ ರೇಷ್ಮೆ, ಹತ್ತಿ ಖಾದಿಯ ಸ್ವಚ್ಛ ಬಟ್ಟೆಯನ್ನು ಹಾಕಬೇಕು. ಮೂರ್ತಿಯನ್ನು ಮನೆಗೆ ತರುವಾಗ ಮೂರ್ತಿಯ ಮುಖವು ತರುವವನ ಕಡೆಗೆ ಮತ್ತು ಬೆನ್ನು ಮುಂದಿನ ಬದಿಗಿರಬೇಕು. ಮೂರ್ತಿಯ ಮುಂಭಾಗದಿಂದ ಸಗುಣ ತತ್ತ್ವ ಮತ್ತು ಹಿಂಭಾಗದಿಂದ ನಿರ್ಗುಣ ತತ್ತ್ವ ಪ್ರಕ್ಷೇಪಿಸುತ್ತಿರುತ್ತದೆ.
ಇದರಲ್ಲಿ ಧಾತುವಿನ (ಲೋಹದ), ಮಣ್ಣಿನ ಪ್ರತಿಮೆಯನ್ನು ಮಾಡಿ ಅಥವಾ ಕಾಗದದ ಮೇಲೆ ಶ್ರೀ ಲಕ್ಷ್ಮೀಯ ಚಿತ್ರವನ್ನು ಬಿಡಿಸಿ, ಮತ್ತೆ ಕೆಲವು ಕಡೆಗಳಲ್ಲಿ ನದಿ ದಡದಿಂದ ಐದು ಸಣ್ಣ ಕಲ್ಲುಗಳನ್ನು ತಂದು ಅವುಗಳನ್ನು ಗೌರಿ ಎಂದು ಪೂಜಿಸುತ್ತಾರೆ.
ಶ್ರಾವಣ ಹುಣ್ಣಿಮೆಯ ದಿನ ಅಪರಾಹ್ನ ಅಥವಾ ಪ್ರದೋಷಕಾಲದಲ್ಲಿ ರಕ್ಷಾಬಂಧನ ಮಾಡಬೇಕು. ಆದರೆ ಆ ಸಮಯದಲ್ಲಿ ಭದ್ರಾ ಕರಣ ವರ್ಜ್ಯ ಮಾಡಬೇಕು
ಶ್ರಾವಣ ಹುಣ್ಣಿಮೆಯಂದು ಸಮುದ್ರದಂಡೆಯಲ್ಲಿ ವಾಸಿಸುವ ಜನರು ವರುಣದೇವನ ಪ್ರೀತ್ಯರ್ಥ ಸಮುದ್ರದ ಪೂಜೆಯನ್ನು ಮಾಡಿ ತೆಂಗಿನಕಾಯಿಯನ್ನು ಅರ್ಪಿಸುತ್ತಾರೆ. ಈ ದಿನ ಅರ್ಪಿಸಲ್ಪಡುವ ತೆಂಗಿನಕಯಿಯು ಶುಭಸೂಚಕವಾಗಿದೆ ಹಾಗೂ ಅದು ಸೃಜನಶಕ್ತಿಯ ಪ್ರತೀಕವೂ ಆಗಿದೆ.
ರಾಖಿಯ ಮಾಧ್ಯಮದಿಂದಾಗುವ ದೇವತೆಗಳ ವಿಡಂಬನೆಯನ್ನು ತಡೆಗಟ್ಟಿ ! : ಇತ್ತೀಚೆಗೆ ರಾಖಿಯ ಮೇಲೆ ‘ಓಂ ಅಥವಾ ದೇವತೆಗಳ ಚಿತ್ರಗಳಿರುತ್ತವೆ. ರಾಖಿಯನ್ನು ಉಪಯೋಗಿಸಿದ ನಂತರ ಅದು ಆಚೀಚೆ ಬಿದ್ದು ದೇವತೆಗಳ ಅಥವಾ ಧರ್ಮಪ್ರತೀಕಗಳ ವಿಡಂಬನೆಯಾಗುತ್ತದೆ. ಇದರಿಂದ ಪಾಪ ತಗಲುತ್ತದೆ. ಇದನ್ನು ತಡೆಗಟ್ಟಲು ರಾಖಿಯನ್ನು ನೀರಿನಲ್ಲಿ ವಿಸರ್ಜಿಸಬೇಕು !
‘೨೦೧೯ ನೇ ಇಸವಿಯಲ್ಲಿನ ರಾಖಿ ಹುಣ್ಣಿಮೆಯಂದು ಸನಾತನದ ಇಬ್ಬರು ಸಾಧಕಿಯರು ಮತ್ತು ಪೂ. (ಸೌ.) ಲಕ್ಷ್ಮೀ (ಮಾಯಿ) ನಾಯಿಕ ಇವರು ಪರಾತ್ಪರ ಗುರು ಡಾ. ಆಠವಲೆಯವರಿಗೆ ರಾಖಿಗಳನ್ನು ಅರ್ಪಿಸಿದರು. ಈ ರಾಖಿಗಳಲ್ಲಿ ಬಹಳ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತವಾಗುವುದು ಅವುಗಳ ಸೂಕ್ಷ್ಮದಲ್ಲಿನ ಸ್ಪಂದನಗಳಿಂದ ಗಮನಕ್ಕೆ ಬಂದಿತು.
ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿ ಸೂಕ್ಷ್ಮ ದೈವೀ ಕಣಗಳು.