ದೀಪಾವಳಿಯ ನಿಮಿತ್ತ ದೇವತೆಯ ತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಯನ್ನು ಬಿಡಿಸಿರಿ !
ದೀಪಾವಳಿಯ ನಿಮಿತ್ತ ದೇವತೆಯ ತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಯನ್ನು ಬಿಡಿಸಿರಿ !
ದೀಪಾವಳಿಯ ನಿಮಿತ್ತ ದೇವತೆಯ ತತ್ತ್ವ ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಯನ್ನು ಬಿಡಿಸಿರಿ !
ಕರ್ಮಕಾಂಡದ ಸಾಧನೆಗನುಸಾರ ಆಪತ್ಕಾಲದಲ್ಲಿ ಯಾವುದಾದರೊಂದು ವರ್ಷಕುಲಾಚಾರದಂತೆ ವ್ರತ, ಉತ್ಸವ ಅಥವಾ ಧಾರ್ಮಿಕ ಕೃತಿಗಳನ್ನು ಆಚರಿಸಲು ಸಾಧ್ಯವಾಗದಿದ್ದರೆ ಅಥವಾ ಕರ್ಮದಲ್ಲಿ ಏನಾದರೂ ನ್ಯೂನ್ಯತೆಗಳು ಉಳಿದಿದ್ದರೆ, ಮುಂದಿನ ವರ್ಷ ಅಥವಾ ಮುಂದಿನ ಕಾಲದಲ್ಲಿ ಯಾವಾಗ ಸಾಧ್ಯವಿರುತ್ತದೆಯೋ, ಆಗ ಆ ವ್ರತ, ಉತ್ಸವ ಅಥವಾ ಧಾರ್ಮಿಕ ಕೃತಿಗಳನ್ನು ಅಧಿಕ ಉತ್ಸಾಹದಿಂದ ಆಚರಿಸಬೇಕು.
ಪಾತಾಳದಲ್ಲಿ ವಾಸಿಸುವ ಅಸುರಿ ಶಕ್ತಿಯ ಬಲ ಹೆಚ್ಚಾಗಿದ್ದರಿಂದ ಅವುಗಳು ಬ್ರಹ್ಮಾಂಡದಲ್ಲಿರುವ ಪೃಥ್ವಿ, ಸ್ವರ್ಗ ಮತ್ತು ಉಚ್ಚ ಲೋಕಗಳ ಮೇಲೆ ದಂಡೆತ್ತಿ ಹೋಗಿ ಅಲ್ಲಿ ವಾಸಿಸುತ್ತಿದ್ದ ಸಾತ್ತ್ವಿಕ ಜೀವಗಳ ಸಾಧನೆಯಲ್ಲಿ ವಿಘ್ನ ತರಲು ಪ್ರಯತ್ನಿಸಿದವು. ನವರಾತ್ರಿಯ ಅವಧಿಯಲ್ಲಿ ದೇವಿಯ ಸಕಾರಾತ್ಮಕ ಊರ್ಜೆ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ.
ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ ಹಿರಣ್ಯಗರ್ಭಮನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ.
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ. ದೇವಿಯ ಚರಣಗಳಿಂದ ಆರಂಭಿಸಿ ಶಿರದವರೆಗೆ ಏರಿಸಿ, ಅವರನ್ನು ಕುಂಕುಮದಿಂದ ಆಚ್ಛಾದಿಸುತ್ತಾರೆ. ಕುಂಕುಮಾರ್ಚನೆಯು ಪೂರ್ಣವಾದ ನಂತರ ದೇವಿಗೆ ಆರತಿಯನ್ನು ಬೆಳಗುತ್ತಾರೆ.
ವಿವಾಹದಂತಹ ಯಾವುದಾದರೊಂದು ವಿಧಿಯ ನಂತರ ಈ ಕುಲದೇವತೆ ಇರುವವರ ಮನೆಯಲ್ಲಿ ದೇವಿಯ ಗೊಂದಲವನ್ನು (ಒಂದು ಕುಲಾಚಾರ) ಹಾಕುತ್ತಾರೆ. ಕೆಲವರ ಮನೆಯಲ್ಲಿ ವಿವಾಹದಂತಹ ಕಾರ್ಯಗಳು ವ್ಯವಸ್ಥಿತವಾಗಿ ನಡೆದಿದ್ದರಿಂದ ಸತ್ಯನಾರಾಯಣನ ಪೂಜೆಯನ್ನು ಮಾಡುತ್ತಾರೆ ಅಥವಾ ಕೋಕಣಸ್ಥ ಬ್ರಾಹ್ಮಣರಲ್ಲಿ ದೇವಿಗೆ ಹಾಲು-ಮೊಸರನ್ನು ಅರ್ಪಿಸುತ್ತಾರೆ, ಇದು ಸಹ ಹಾಗೇ ಆಗಿದೆ.
ನವರಾತ್ರಿಯ ಒಂಬತ್ತು ದಿನಗಳಲ್ಲಿ ಹೆಚ್ಚಿನ ಜನರು ಉಪವಾಸವನ್ನು ಮಾಡುತ್ತಾರೆ. ಒಂಬತ್ತು ದಿನಗಳು ಉಪವಾಸ ಮಾಡಲು ಸಾಧ್ಯವಿಲ್ಲದಿದ್ದರೆ, ಪ್ರಥಮ ದಿನ ಹಾಗೂ ಅಷ್ಟಮಿಯಂದು ಉಪವಾಸವನ್ನು ಅವಶ್ಯವಾಗಿ ಮಾಡುತ್ತಾರೆ. ದೇವಿ ಉಪಾಸನೆಯ ಇತರ ಭಾಗಗಳೊಂದಿಗೆ ನವರಾತ್ರಿಯ ಕಾಲಾವಧಿಯಲ್ಲಿ ‘ಶ್ರೀ ದುರ್ಗಾದೇವ್ಯೈ ನಮಃ’ ಎಂದು ಜಪಿಸಬೇಕು.
ನವರಾತ್ರಿಯಲ್ಲಿ ಒಂಭತ್ತು ದಿನ ಪ್ರತಿಯೊಂದು ದಿನ ಒಬ್ಬಳಿಗೆ ಅಥವಾ ಮೊದಲ ದಿನ ಒಬ್ಬಳಿಗೆ, ಎರಡನೇ ದಿನ ಇಬ್ಬರಿಗೆ, ಒಂಭತ್ತನೇ ದಿನ ಒಂಭತ್ತು ಕುಮಾರಿಯರಿಗೆ, ಹೀಗೆ ಏರಿಕೆ ಕ್ರಮದಲ್ಲಿ ಭೋಜನವನ್ನು ನೀಡಬೇಕೆಂಬ ವಿಧಾನವಿದೆ. ಎರಡರಿಂದ ಹತ್ತು ವರ್ಷಗಳ ವಯಸ್ಸಿನ ಕುಮಾರಿಯರನ್ನು ಭೋಜನಕ್ಕೆ ಆಮಂತ್ರಿಸುತ್ತಾರೆ. ಪ್ರತಿಯೊಂದು ವರ್ಣದವರೂ ತಮ್ಮ ತಮ್ಮ ವರ್ಣದ ಕುಮಾರಿಯರನ್ನು ಭೋಜನಕ್ಕೆ ಆಮಂತ್ರಿಸಬೇಕಾಗಿರುತ್ತದೆ.