ಕೆಲವು ದೇವಿಯರ ಉಪಾಸನೆಯ ವೈಶಿಷ್ಟ್ಯಗಳು 

ವಿವಾಹದಂತಹ ಯಾವುದಾದರೊಂದು ವಿಧಿಯ ನಂತರ ಈ ಕುಲದೇವತೆ ಇರುವವರ ಮನೆಯಲ್ಲಿ ದೇವಿಯ ಗೊಂದಲವನ್ನು (ಒಂದು ಕುಲಾಚಾರ) ಹಾಕುತ್ತಾರೆ. ಕೆಲವರ ಮನೆಯಲ್ಲಿ ವಿವಾಹದಂತಹ ಕಾರ್ಯಗಳು ವ್ಯವಸ್ಥಿತವಾಗಿ ನಡೆದಿದ್ದರಿಂದ ಸತ್ಯನಾರಾಯಣನ ಪೂಜೆಯನ್ನು ಮಾಡುತ್ತಾರೆ ಅಥವಾ ಕೋಕಣಸ್ಥ ಬ್ರಾಹ್ಮಣರಲ್ಲಿ ದೇವಿಗೆ ಹಾಲು-ಮೊಸರನ್ನು ಅರ್ಪಿಸುತ್ತಾರೆ, ಇದು ಸಹ ಹಾಗೇ ಆಗಿದೆ.

ನವರಾತ್ರಿಯ ವ್ರತದಲ್ಲಿ ಪಾಲಿಸುವಂತಹ ಆಚಾರಗಳು

ನವರಾತ್ರಿಯ ಒಂಬತ್ತು ದಿನಗಳಲ್ಲಿ ಹೆಚ್ಚಿನ ಜನರು ಉಪವಾಸವನ್ನು ಮಾಡುತ್ತಾರೆ. ಒಂಬತ್ತು ದಿನಗಳು ಉಪವಾಸ ಮಾಡಲು ಸಾಧ್ಯವಿಲ್ಲದಿದ್ದರೆ, ಪ್ರಥಮ ದಿನ ಹಾಗೂ ಅಷ್ಟಮಿಯಂದು ಉಪವಾಸವನ್ನು ಅವಶ್ಯವಾಗಿ ಮಾಡುತ್ತಾರೆ. ದೇವಿ ಉಪಾಸನೆಯ ಇತರ ಭಾಗಗಳೊಂದಿಗೆ ನವರಾತ್ರಿಯ ಕಾಲಾವಧಿಯಲ್ಲಿ ‘ಶ್ರೀ ದುರ್ಗಾದೇವ್ಯೈ ನಮಃ’ ಎಂದು ಜಪಿಸಬೇಕು.

ಕುಮಾರಿ ಪೂಜೆ

ನವರಾತ್ರಿಯಲ್ಲಿ ಒಂಭತ್ತು ದಿನ ಪ್ರತಿಯೊಂದು ದಿನ ಒಬ್ಬಳಿಗೆ ಅಥವಾ ಮೊದಲ ದಿನ ಒಬ್ಬಳಿಗೆ, ಎರಡನೇ ದಿನ ಇಬ್ಬರಿಗೆ, ಒಂಭತ್ತನೇ ದಿನ ಒಂಭತ್ತು ಕುಮಾರಿಯರಿಗೆ, ಹೀಗೆ ಏರಿಕೆ ಕ್ರಮದಲ್ಲಿ ಭೋಜನವನ್ನು ನೀಡಬೇಕೆಂಬ ವಿಧಾನವಿದೆ. ಎರಡರಿಂದ ಹತ್ತು ವರ್ಷಗಳ ವಯಸ್ಸಿನ ಕುಮಾರಿಯರನ್ನು ಭೋಜನಕ್ಕೆ ಆಮಂತ್ರಿಸುತ್ತಾರೆ. ಪ್ರತಿಯೊಂದು ವರ್ಣದವರೂ ತಮ್ಮ ತಮ್ಮ ವರ್ಣದ ಕುಮಾರಿಯರನ್ನು ಭೋಜನಕ್ಕೆ ಆಮಂತ್ರಿಸಬೇಕಾಗಿರುತ್ತದೆ.

ಆಹಾರ ಮತ್ತು ಆಚಾರ ಇವುಗಳ ಕುರಿತು ಅದ್ವಿತೀಯ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಈ ಅಗ್ನಿ ನೈಸರ್ಗಿಕವಾಗಿರುವುದರಿಂದ ಅದರಿಂದ ಪ್ರಕ್ಷೇಪಿಸಲ್ಪಡುವ ಸೂಕ್ಷ್ಮ ತೇಜದಾಯಕ ಲಹರಿಗಳು ಸೂಕ್ಷ್ಮ ಸ್ತರದಲ್ಲಿರುವ ರಜ-ತಮಾತ್ಮಕ ಕಣಗಳನ್ನು ವಿಘಟಿತಗೊಳಿಸಬಲ್ಲವು. ಒಲೆಯ ಮೇಲಿನ ಅಡುಗೆಯನ್ನು ತಯಾರಿಸುವಾಗ ಆಹಾರದ ಮೇಲೆ ಅಗ್ನಿಯ ಸಂಸ್ಕಾರವಾಗಿ ಸಾತ್ತ್ವಿಕ ಆಹಾರ ತಯಾರಾಗುತ್ತದೆ. ಇದರದೇ ಅನುಭವವು ಪರೀಕ್ಷಣೆಯಲ್ಲಿ ಮಣ್ಣಿನ ಒಲೆಯ ಮೇಲೆ ಬೇಯಿಸಿದ ಅನ್ನದ ಸಂದರ್ಭದಲ್ಲಿ ಕಂಡು ಬಂದಿತು. ಮಣ್ಣಿನ ಒಲೆಯ ಮೇಲೆ ಬೇಯಿಸಿದ ಅನ್ನದಲ್ಲಿ ಸ್ವಲ್ಪವೂ ನಕಾರಾತ್ಮಕ ಸ್ಪಂದನಗಳು ಇರಲಿಲ್ಲ ಹಾಗೂ ಬಹಳ ಸಕಾರಾತ್ಮಕ ಸ್ಪಂದನಗಳು ಕಂಡು ಬಂದವು.

ಪ್ರಾಣಿಗಳ ಬಗ್ಗೆ ನಾವಿನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆಯನ್ನು ಮಾಡುವ ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯ

ಕೆಲವು ಸಾಧಕ ಜೀವಗಳು ಮಾನವೇತರ ಯೋನಿಗಳಲ್ಲಿ (ಪಶು-ಪಕ್ಷಿ ಮತ್ತು ವನಸ್ಪತಿ) ಜನ್ಮ ಪಡೆದು ಅವುಗಳ ಪ್ರಾರಬ್ಧದ ಭೋಗವನ್ನು ಅನುಭವಿಸಿ ಮುಗಿಸುತ್ತವೆ. ಅವು ಸಾತ್ತ್ವಿಕ ಸ್ಥಳದಲ್ಲಿ ಮತ್ತು ಸಾತ್ತ್ವಿಕ ವ್ಯಕ್ತಿಗಳ ಕಡೆಗೆ ಸಹಜವಾಗಿ ಆಕರ್ಷಿಸಲ್ಪಡುತ್ತವೆ ಮತ್ತು ಅವರ ಸಹವಾಸದಲ್ಲಿರುತ್ತವೆ. ಸನಾತನದ ಆಶ್ರಮದಲ್ಲಿರುವ ಸಾತ್ತ್ವಿಕತೆಯಿಂದ ಕೆಲವು ಪ್ರಾಣಿ ಮತ್ತು ಪಕ್ಷಿ, ಉದಾ. ಪಾತರಗಿತ್ತಿ, ಜಿಗಣೆ ಇತ್ಯಾದಿ ಆಶ್ರಮದಲ್ಲಿ ತಾವಾಗಿಯೇ ಬರುತ್ತವೆ.

ನಾವೀನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಪೃಥ್ವಿಯಲ್ಲಿ ನಮ್ಮ ಸಮಯವು ಅಮೂಲ್ಯವಾಗಿದೆ. ದೇವರು ನಮಗೆ ಈ ಸಮಯವನ್ನು ಆಧ್ಯಾತ್ಮಿಕ ಉನ್ನತಿ ಮಾಡಿಕೊಳ್ಳಲು ನೀಡಿದ್ದಾನೆ. ನಾವು ಮತ್ತು ನಮ್ಮ ಮಕ್ಕಳು ನೋಡುತ್ತಿರುವ ಸೋಶಿಯಲ್ ಮೀಡಿಯಾದ ವಿಷಯಗಳು ಯಾವ ವಿಧದ್ದಾಗಿವೆ  ಎನ್ನುವುದರ ಬಗ್ಗೆ ನಾವು ಜಾಗೃತರಾಗಿದ್ದರೆ, ನಾವು ಪ್ರತಿಕೂಲ ವಿಷಯಗಳನ್ನು ವೀಕ್ಷಿಸದೇ ಆಧ್ಯಾತ್ಮಿಕ ಉನ್ನತಿಯೆಡೆಗೆ ಕೊಂಡೊಯ್ಯುವ ವಿಷಯಗಳನ್ನು ನೋಡಲು ಸಾಧ್ಯವಾಗುವುದು.

ನಾವೀನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವು ‘ಯುನಿವರ್ಸಲ್ ಔರಾ ಸ್ಕ್ಯಾನರ್ (ಯು.ಎ.ಎಸ್) ಎಂಬ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷೆ

ಈ ವರ್ಷ ೨ ರಿಂದ ೧೭ ಸೆಪ್ಟೆಂಬರ್ ೨೦೨೦ ಇದು ಪಿತೃಪಕ್ಷದ ಕಾಲವಾಗಿದೆ. ಈ ಕಾಲಾವಧಿಯಲ್ಲಿ ಮಹಾಲಯ ಶ್ರಾದ್ಧವನ್ನು ಮಾಡುವವರಿಗೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮವನ್ನು ವೈಜ್ಞಾನಿಕ ದೃಷ್ಟಿಯಲ್ಲಿ ಅಧ್ಯಯನ ಮಾಡಲು ‘ಯುನಿವರ್ಸಲ್ ಔರಾ ಸ್ಕ್ಯಾನರ್ (ಯು.ಎ.ಎಸ್.) ಈ ಉಪಕರಣದ ಮೂಲಕ ಪರೀಕ್ಷಣೆ ಮಾಡಲಾಯಿತು.

‘ಮಹರ್ಷೀ ಅಧ್ಯಾತ್ಮ ವಿಶ್ವವಿದ್ಯಾಲಯವು ‘ಯೂ.ಎ.ಎಸ್ (ಯುನಿವರ್ಸಲ್ ಅವ್ರಾ ಸ್ಕ್ಯಾನರ್) ಎಂಬ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷಣೆ

ಪರಾತ್ಪರ ಗುರು ಡಾ. ಆಠವಲೆಯವರು ನವಗ್ರಹಗಳ ದೀಪಗಳಿಗೆ ಹಸ್ತಸ್ಪರ್ಶ ಮಾಡಿದ ಬಳಿಕ ಆ ಎಲ್ಲ ದೀಪಗಳಲ್ಲಿನ ಸಕಾರಾತ್ಮಕ ಊರ್ಜೆ ತುಂಬಾ ಹೆಚ್ಚಾಯಿತು; ಆದರೆ ಪರೀಕ್ಷಣೆಯಲ್ಲಿನ ಇತರ ದೀಪಗಳಿಗೆ ಹೋಲಿಸಿದರೆ ಶನಿ, ಕೇತು, ರಾಹು ಹಾಗೂ ಗುರು ಗ್ರಹಗಳ ದೀಪಗಳ ಸಕಾರಾತ್ಮಕ ಊರ್ಜೆಯ ಪ್ರಭಾವಲಯಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಹೆಚ್ಚಳವಾಯಿತು.