ರಾಜ್ಯಪಾಲರ ಒಪ್ಪಿಗೆಯೊಂದಿಗೆ ಉತ್ತರ ಪ್ರದೇಶದಲ್ಲಿ ‘ಲವ್ ಜಿಹಾದ್’ ವಿರುದ್ಧ ಕಾನೂನನು ಜಾರಿಗೆ
ಉತ್ತರ ಪ್ರದೇಶ ಸರಕಾರ ಸಮ್ಮತಿಸಿದ ‘ಲವ್ ಜಿಹಾದ್’ ವಿರುದ್ಧ ಸುಗ್ರೀವಾಜ್ಞೆಯ ಕರಡನ್ನು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರಿಗೆ ಅನುಮೋದನೆಗಾಗಿ ಕಳುಹಿಸಿತ್ತು. ರಾಜ್ಯಪಾಲರು ಇದಕ್ಕೆ ಸಹಿ ಹಾಕಿ ಒಪ್ಪಿಗೆ ನೀಡಿದ್ದಾರೆ. ಆದ್ದರಿಂದ ನವೆಂಬರ್ ೨೮ ರಿಂದ ಈ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಈಗ ಈ ಸುಗ್ರೀವಾಜ್ಞೆಯನ್ನು ವಿಧಾನಸಭೆಯ ಉಭಯ ಸದನಗಳಲ್ಲಿ ೬ ತಿಂಗಳೊಳಗೆ ಅಂಗೀಕರಿಸಬೇಕಾಗಿದೆ.