ಗೋಪಾಲಗಂಜ(ಬಿಹಾರ)ನಲ್ಲಿ ೨೬೪ ಕೋಟಿ ಖರ್ಚು ಮಾಡಿ ನಿರ್ಮಿಸಿದ ಸೇತುವೆ ಅತೀವೃಷ್ಟಿಯಿಂದಾಗಿ ೨೯ ದಿನಗಳಲ್ಲೇ ಕೊಚ್ಚಿಹೋಯಿತು !
ಇಲ್ಲಿ ೨೬೪ ಕೋಟಿ ಖರ್ಚು ಮಾಡಿ ಗಂಧಕ ನದಿಯ ಮೇಲೆ ಕಟ್ಟಿದ್ದ ಸತ್ತರಘಾಟ ಸೇತುವೆಯು ಅತೀವೃಷ್ಟಿಯಿಂದಾಗಿ ೨೯ ದಿನಗಳಲ್ಲೇ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಇದರಿಂದ ಲಾಲಛಾಪಾರ, ಮುಜಫ್ಫರಪುರ, ಮೋತಿಹಾರಿ ಹಾಗೂ ಬೇತಿಯಾ ಈ ಊರುಗಳ ಸಂಪರ್ಕ ಕಡಿತಗೊಂಡಿದೆ. ೨೯ ದಿನಗಳ ಹಿಂದೆ ಮುಖ್ಯಮಂತ್ರಿ ನಿತೀಶ ಕುಮಾರ ಇವರು ಈ ಸೇತುವೆಯನ್ನು ‘ವಿಡಿಯೋ ಕಾನ್ಫರೆನ್ಸ್’ ಮೂಲಕ ಉದ್ಘಾಟಿಸಿದ್ದರು.