ಶ್ರೀಕೃಷ್ಣ ಜನ್ಮಭೂಮಿಯ ಮೇಲೆ ಶಾಹಿ ಈದ್ಗಾ ಮಸೀದಿಯಿಂದಾಗಿರುವ ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಅರ್ಜಿ ಮಥುರಾ ನ್ಯಾಯಾಲಯದಿಂದ ತಿರಸ್ಕೃತ
ಮಥುರಾದ ಶ್ರೀಕೃಷ್ಣ ಜನ್ಮಭೂಮಿಗೆ ಸೇರಿದ ೧೩.೩೭ ಎಕರೆ ಜಮೀನಿನ ಮಾಲೀಕತ್ವ ಮತ್ತು ಈ ಭೂಮಿಯಲ್ಲಿ ಶಾಹಿ ಈದ್ಗಾ ಮಸೀದಿಯಿಂದಾಗಿರುವ ಅತಿಕ್ರಮಣ ತೆರವುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಪ್ಟೆಂಬರ್ ೩೦ ರಂದು ಮಥುರಾ ನ್ಯಾಯಾಲಯ ತಿರಸ್ಕರಿಸಿದೆ. ಭಗವಾನ್ ಕೃಷ್ಣ ವಿರಾಜಮಾನ್, ಕಟರಾ ಕೇಶವ ದೇವ ಖೇವಾಟ್, ರಂಜನಾ ಅಗ್ನಿಹೋತ್ರಿ ಸೇರಿದಂತೆ ಒಟ್ಟು ಆರು ಮಂದಿ ಅರ್ಜಿ ಸಲ್ಲಿಸಿದ್ದರು.