ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
ರಾಜಕೀಯ ಪಕ್ಷದ ನೇತಾರರು ಮತ್ತು ಕಾರ್ಯಕರ್ತರು ಯಾರೇ ಹಣ ಅಥವಾ ಹುದ್ದೆಯನ್ನು ನೀಡಿದರೆ ಇನ್ನೊಂದು ಪಕ್ಷಕ್ಕೆ ಹೋಗುತ್ತಾರೆ. ತದ್ವಿರುದ್ಧ ಭಕ್ತನು ದೇವರ ಪಕ್ಷವನ್ನು ಬಿಟ್ಟು, ದೇವರ ಚರಣದಲ್ಲಿರುವ ಜಾಗವನ್ನು ಬಿಟ್ಟು ಬೇರೆಕಡೆ ಎಲ್ಲಿಯೂ ಹೋಗುವುದಿಲ್ಲ.
ರಾಜಕೀಯ ಪಕ್ಷದ ನೇತಾರರು ಮತ್ತು ಕಾರ್ಯಕರ್ತರು ಯಾರೇ ಹಣ ಅಥವಾ ಹುದ್ದೆಯನ್ನು ನೀಡಿದರೆ ಇನ್ನೊಂದು ಪಕ್ಷಕ್ಕೆ ಹೋಗುತ್ತಾರೆ. ತದ್ವಿರುದ್ಧ ಭಕ್ತನು ದೇವರ ಪಕ್ಷವನ್ನು ಬಿಟ್ಟು, ದೇವರ ಚರಣದಲ್ಲಿರುವ ಜಾಗವನ್ನು ಬಿಟ್ಟು ಬೇರೆಕಡೆ ಎಲ್ಲಿಯೂ ಹೋಗುವುದಿಲ್ಲ.
ಆಗಸ್ಟ್ ೫ ರಂದು ಅಯೋಧ್ಯೆಯ ರಾಮಮಂದಿರದ ಭೂಮಿ ಪೂಜೆಯನ್ನು ಪ್ರಧಾನಿ ಮೋದಿಯವರ ಹಸ್ತದಿಂದ ನೆರವೇರಲಿದೆ. ಇದು ಜಗತ್ತಿನ ಮೂರನೇ ಅತೀದೊಡ್ಡ ದೇವಸ್ಥಾನವಾಗಲಿದೆ, ಎಂದು ಹೇಳಲಾಗುತ್ತಿದೆ. ಇದರ ಕೆಲಸ ಪೂರ್ಣವಾಗಲು ೩ ವರ್ಷ ತಗಲಬಹುದು.
ನೇಪಾಳವು ಬಿಹಾರ್ನ ಪಶ್ಚಿಮ ಚಂಪಾರಣ ಜಿಲ್ಲೆಯಲ್ಲಿರುವ ‘ಸೀತಾಮಾತಾ ಗುಹೆ’ ಹೆಸರಿನಿಂದ ಗುರುತಿಸುವ ಪ್ರದೇಶವನ್ನು ತನ್ನದೆಂದು ಹೇಳಿಕೊಳ್ಳುತ್ತಿದೆ. ಕೆಲವು ನೇಪಾಳಿ ಸಮಾಜಕಂಟಕರು ಭಾರತ-ನೇಪಾಳ ಗಡಿಯಲ್ಲಿರುವ ಸೀತಾಮಾತಾ ಗುಹೆಯ ಪ್ರದೇಶದಲ್ಲಿ ಹಾಕಲಾಗಿದ್ದ ಕಲ್ಲಿನ ಖಂಬ ಕ್ರಮಸಂಖ್ಯೆ ೪೩೬ ಕಿತ್ತುಹಾಕಿದ್ದಾರೆ.
‘ಕೊರೋನಾದಿಂದ ಪಾರಾಗಲು ಗೋಮೂತ್ರ ಸೇವಿಸಿ’, ಎಂದು ಪಶ್ಚಿಮ ಬಂಗಾಲದ ಭಾಜಪ ಶಾಸಕ ಹಾಗೂ ಬಂಗಾಲ ಪ್ರದೇಶಾಧ್ಯಕ್ಷ ದಿಲೀಪ ಘೋಷ ಇವರು ಸಲಹೆ ನೀಡಿದ್ದಾರೆ. ಈ ಬಗ್ಗೆ ಒಂದು ‘ವಿಡಿಯೋ’ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾಗಿದೆ. ಈ ‘ವಿಡಿಯೋ’ದಲ್ಲಿ ಶಾಸಕ ಘೋಷ ಇವರು ಒಂದು ಸಭೆಯಲ್ಲಿ ಆರೋಗ್ಯಕ್ಕಾಗಿ ಮನೆಮದ್ದಿನ ಬಗ್ಗೆ ತಿಳುವಳಿಕೆ ನೀಡುತ್ತಿರುವಂತೆ ಕಂಡುಬರುತ್ತಿದೆ.
ಇಲ್ಲಿಯ ನಖತರಾಣಾ ತಾಲೂಕಿನ ನಾರಾ ಗ್ರಾಮದಲ್ಲಿಯ ಮದರಸಾದ ಶಿಕ್ಷಕ ಮೌಲಾನಾ ಸಮದುದ್ದೀನ ಹಾಜಿ ಸುಲೆಮಾನ ಜಾಟ ಈತನು ಓರ್ವ ವಿದ್ಯಾರ್ಥಿನಿಯನ್ನು ಸತತ ೪ ವರ್ಷಗಳಿಂದ ಲೈಂಗಿಕ ಶೋಷಣೆಯನ್ನು ಮಾಡಿರುವ ಘಟನೆ ನಡೆದಿದೆ.
ವಿಶ್ವವಿಖ್ಯಾತ ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗಳು ಹೀಗೆ ೧೪೦ ಜನರಿಗೆ ಕೊರೋನಾದ ಸೋಂಕು ತಗಲಿದೆ. ಆದರೂ ದೇವಸ್ಥಾನ ಬೋರ್ಡ್ನ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿಯವರು ‘ದೇವಸ್ಥಾನದಲ್ಲಿ ದರ್ಶನವನ್ನು ನಿಲ್ಲಿಸುವ ಯಾವುದೇ ವಿಚಾರ ಇಲ್ಲ’, ಎಂದು ಸ್ಪಷ್ಟಪಡಿಸಿದ್ದಾರೆ.
ಇಲ್ಲಿ ಜುಲೈ ೧೮ ರಂದು ಬೆಳಿಗ್ಗೆ ನಡೆದ ಚಕಮಕಿಯಲ್ಲಿ ಸೈನಿಕರು ೩ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಹಾಗೂ ಅವರಿಂದ ದೊಡ್ಡಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ ೧೭ ರಂದು ರಾತ್ರಿ ಕಾಶ್ಮೀರದ ಪೂಂಛನಲ್ಲಿ ಪಾಕಿಸ್ತಾನದ ಸೈನಿಕರು ಮಾಡಿದ ಗುಂಡು ಹಾರಾಟದಲ್ಲಿ ಭಾರತದ ಮಹಮದ ರಫೀಕ್, ಆತನ ಪತ್ನಿ ರಾಫಿಯಾ ಬಿ ಹಾಗೂ ೧೫ ವರ್ಷದ ಮಗ ಇರಫಾನ್ ಈ ಮೂರು ಜನರ ಹತ್ಯೆಯಾಗಿದೆ.
ಭಾರತೀಯ ರೇಲ್ವೆಯು ಸಿಗ್ನಲ್ ಹಾಗೂ ದೂರಸಂಪರ್ಕ ಈ ಕೆಲಸಕ್ಕಾಗಿ ‘ಬೀಜಿಂಗ್ ನ್ಯಾಶನಲ್ ರೇಲ್ವೆ ರೀಸರ್ಚ್ ಆಂಡ್ ಡಿಸೈನಿಂಗ್ ಇನ್ಸ್ಟಿಟ್ಯೂಟ್ ಆಫ್ ಸಿಗ್ನಲ್ ಆಂಡ್ ಕಮ್ಯುನಿಕೇಶನ್’ ಈ ಚೀನಾದ ಕಂಪನಿಗೆ ನೀಡಿದ್ದ ೪೭೧ ಕೋಟಿ ರೂಪಾಯಿಯ ಗುತ್ತಿಗೆಯನ್ನು ರದ್ದು ಪಡಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.
ಕೇರಳದ ೫೨ ವರ್ಷದ ಪಾದ್ರಿ ರಾಬಿನ್ ವಡಕ್ಕಮಚೆರಿಯನ್ನು ಓರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣದಲ್ಲಿ ೨೦ ವರ್ಷದ ಜೈಲು ಶಿಕ್ಷೆಯನ್ನು ನೀಡಲಾಗಿದೆ. ಆತ ಇದರ ವಿರುದ್ಧ ಕೇರಳದ ಉಚ್ಚ ನ್ಯಾಯಾಲಯದಲ್ಲಿ ಒಂದು ಅರ್ಜಿಯ ಮೂಲಕ ಪೀಡಿತೆಯೊಂದಿಗೆ ವಿವಾಹವಾಗಲು ಅನುಮತಿ ನೀಡಬೇಕು ಎಂದು ಕೋರಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್ನ ವಿವಿಧ ಚಲನಚಿತ್ರಗಳು, ವೆಬ್ಸರೀಸ್, ಯೂಟ್ಯೂಬ್ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ.