ವಾಮನ ಜಯಂತಿ
ವಾಮನ ಜಯಂತಿ ಭಾದ್ರಪದ ಶುಕ್ಲ ಪಕ್ಷ ಏಕಾದಶಿ (೨೯.೮.೨೦೨೦) ಈ ನಿಮಿತ್ತ ಇವರ ಚರಣಗಳಲ್ಲಿ ಕೋಟಿ ಕೋಟಿ ನಮನಗಳು
ವಾಮನ ಜಯಂತಿ ಭಾದ್ರಪದ ಶುಕ್ಲ ಪಕ್ಷ ಏಕಾದಶಿ (೨೯.೮.೨೦೨೦) ಈ ನಿಮಿತ್ತ ಇವರ ಚರಣಗಳಲ್ಲಿ ಕೋಟಿ ಕೋಟಿ ನಮನಗಳು
ಅಮೇರಿಕಾದ ರಾಷ್ಟ್ರಾಧ್ಯಕ್ಷ ಡೊನಾಲ್ಡ್ ಟ್ರಂಪ್ ಇವರ ಉಪಸ್ಥಿತಿಯಲ್ಲಿ ವೈಟ್ ಹೌಸ್ನಲ್ಲಿ ನೆರವೇರಿದ ಒಂದು ಕಾರ್ಯಕ್ರಮದಲ್ಲಿ ಭಾರತೀಯ ಸಂಜಾತೆ ಹಾಗೂ ಕಂಪ್ಯೂಟರ್ ಇಂಜಿನಿಯರ್ ಆಗಿರುವ ಸುಧಾ ಸುಂದರಿ ನಾರಾಯಣನ್ ಇವರು ಅಮೇರಿಕಾದ ಪೌರತ್ವದ ಪ್ರಮಾಣವಚನವನ್ನು ಸ್ವೀಕರಿಸಿದರು. ಅಮೇರಿಕಾದ ರಾಷ್ಟ್ರಾಧ್ಯಕ್ಷರ ಉಪಸ್ಥಿತಿಯಲ್ಲಿ ಈ ರೀತಿಯ ಕಾರ್ಯಕ್ರಮ ನಡೆಯುವುದು ಅಪರೂಪದ ಘಟನೆಯಾಗಿದೆ
ಇತ್ತೀಚೆಗೆ ಉತ್ತರಪ್ರದೇಶದ ಮೆರಠ, ಕಾನಪುರ ಹಾಗೂ ಲಖಿಮಪುರ ಖಿರಿಯಲ್ಲಿ ಮತಾಂಧರು ಹಿಂದೂ ಹುಡುಗಿಯರನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿ ಮೋಸಗೊಳಿಸುವ ಘಟನೆಯು ಬಹಿರಂಗಗೊಂಡಿತ್ತು. ‘ಲವ್ ಜಿಹಾದ್’ನ ಘಟನೆಗಳಲ್ಲಿ ಮೆರಠ ಹಾಗೂ ಲಖಿಮಪುರ ಖಿರಿಯಲ್ಲಿ ಹಿಂದೂ ಹುಡುಗಿಯರ ಹತ್ಯೆಯೂ ಆಗಿತ್ತು.
ಯೋಗಋಷಿ ರಾಮದೇವ ಬಾಬಾ ಇವರ ‘ಪತಂಜಲಿ’ ಸಂಸ್ಥೆಯ ‘ಕೊರೋನಿಲ್’ ಈ ಔಷಧಿಯ ಬಗ್ಗೆ ಮದ್ರಾಸ್ ಉಚ್ಚ ನ್ಯಾಯಾಲಯದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ರದ್ದು ಪಡಿಸಿದೆ. ಅದಲ್ಲದೇ ಸರ್ವೋಚ್ಚ ನ್ಯಾಯಾಲಯವು ಈ ಬಗೆಗಿನ ಅರ್ಜಿಯನ್ನೂ ತಿರಸ್ಕರಿಸಿದೆ.
ಆಗಸ್ಟ್ ೧೧ ರಂದು ಬೆಂಗಳೂರಿನಲ್ಲಿ ಮತಾಂಧರು ಮಾಡಿದ ಗಲಭೆಯ ಹಿಂದೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’(ಪಿ.ಎಫ್.ಐ.) ಹಾಗೂ ಅದರ ರಾಜಕೀಯ ಶಾಖೆಯಾಗಿರುವ ‘ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಈ ಪಕ್ಷಗಳು ಇರುವ ಬಗ್ಗೆ ತನಿಖೆಯಿಂದ ಬಹಿರಂಗವಾಗಿದೆ.
ಈ ಮೂರ್ತಿಯನ್ನು ಅಖಂಡ ‘ಕೃಷ್ಣಶಿಲೆ’ ಕಲ್ಲಿನಲ್ಲಿ ಕೆತ್ತಿ ನಿರ್ಮಿಸಲಾಗಿದೆ ಮತ್ತು ಅದರ ತೂಕ ೫೦೦ ಕಿಲೋದಷ್ಟಿದೆ. ಶ್ರೀ ಸಿದ್ಧಿವಿನಾಯಕನ ಮೂರ್ತಿಯು ಕಮಲದ ಆಸನದ ಮೇಲಿದೆ. ಸಪ್ತರ್ಷಿಗಳು ಮಾಡಿದ ಮಾರ್ಗದರ್ಶನಕ್ಕನುಸಾರ ಈ ಮೂರ್ತಿಯನ್ನು ತಯಾರಿಸಲಾಗಿದೆ. ಒಂದು ಶುಭಮುಹೂರ್ತದಲ್ಲಿ ಸನಾತನದ ರಾಮನಾಥಿ ಆಶ್ರಮದಲ್ಲಿ ಅದರ ಪ್ರಾಣಪ್ರತಿಷ್ಠಾಪನೆಯನ್ನು ಮಾಡಲಾಗುವುದು.
ಪೂರ್ವ ದೆಹಲಿಯ ಆಮ್ ಆದ್ಮಿ ಪಕ್ಷದ ವಾರ್ಡ್ ಸಂ. ೫೯-ಈ ಯ ಕಾರ್ಪೊರೇಟರ್ ಹಾಗೂ ಅಲ್ಲಿಯ ಗಲಭೆಯ ಆರೋಪಿ ತಾಹಿರ್ ಹುಸೇನ್ ಇವರನ್ನು ಕಾರ್ಪೊರೇಟರ್ ಹುದ್ದೆಯಿಂದ ತೆಗೆದುಹಾಕಲಾಗಿದೆ. ಪೂರ್ವ ದೆಹಲಿಯ ಮಹಾನಗರ ಪಾಲಿಕೆಯು ಆಗಸ್ಟ್ ೨೬ ರಂದು ನಿರ್ಧಾರ ತೆಗೆದುಕೊಂಡರು.
ಕೆಲವು ಬಾಂಗ್ಲಾದೇಶಿ ಮತಾಂಧರು ಚೆನ್ನೈಯ ಯುವತಿಯನ್ನು ಬ್ರಿಟನ್ನಿಂದ ಅಪಹರಿಸಿ ಆಕೆಯನ್ನು ಬಾಂಗ್ಲಾದೇಶಕ್ಕೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೀಡಿತೆಯ ಪೋಷಕರು ೨೨ ಮೇ ೨೦೨೦ ರಂದು ಪೊಲೀಸರಲ್ಲಿ ದೂರನ್ನು ದಾಖಲಿಸಿದ್ದರು. ಅಲ್ಲಿಂದ ಈ ಪ್ರಕರಣವು ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾಯಿಸಲಾಯಿತು.
ಇಲ್ಲಿಯ ಮಹಮ್ಮದ ಬಾಜಾರ ಪ್ರದೇಶದಲ್ಲಿ ಓರ್ವ ಆದಿವಾಸಿ ಮಹಿಳೆಯ ಮೇಲೆ ಅನೈತಿಕ ಸಂಬಂಧದ ಆರೋಪ ಮಾಡಲಾಗಿತ್ತು ಹಾಗೂ ಪಂಚಾಯತರು ಆಕೆಗೆ ೧ ಲಕ್ಷ ರೂಪಾಯಿ ದಂಡ ನೀಡುವ ಶಿಕ್ಷೆಯನ್ನು ಹೇಳಿದ್ದರು; ಆದರೆ ಇಷ್ಟು ದಂಡ ತುಂಬಲು ಸಾಧ್ಯವಾಗಲಿಲ್ಲ. ದಂಡವನ್ನು ತುಂಬದೇ ಇದ್ದರಿಂದ ಪಂಚರೇ ಆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದರು.
ರಾಜ್ಯದಲ್ಲಿ ಕೊರೋನಾಮುಕ್ತರಾಗಿದ್ದ ೨ ರೋಗಿಗಳಿಗೆ ಪುನಃ ಕೊರೋನಾದ ಸೋಂಕು ತಗಲಿರುವ ಮಾಹಿತಿ ತೆಲಂಗಾಣ ರಾಜ್ಯದ ಆರೋಗ್ಯ ಸಚಿವ ಇತೆಲಾ ರಾಜೆಂದರ ಇವರು ನೀಡಿದರು. ಆದ್ದರಿಂದ ‘ನಾಗರಿಕರು ಭಯಪಡಬಾರದು. ಕೊರೋನಾದ ಸಾವಿನ ಪ್ರಮಾಣ ತುಂಬಾ ನಗಣ್ಯವಾಗಿದೆ. ಶೇ. ೯೯ ರಷ್ಟು ಜನರು ಗುಣಮುಖರಾಗುತ್ತಿದ್ದಾರೆ’, ಎಂದೂ ಅವರು ಹೇಳಿದರು.