ಸಪ್ಟೆಂಬರ್ ೩ ರಿಂದ ಆರಂಭವಾಗಲಿರುವ ಮಹಾಲಯಾರಂಭದ ನಿಮಿತ್ತ…
ಹಿಂದೂ ಧರ್ಮದಲ್ಲಿ ಹೇಳಿರುವ ಈಶ್ವರಪ್ರಾಪ್ತಿಯ ಮೂಲಭೂತ ಸಿದ್ಧಾಂತಗಳಲ್ಲಿ ‘ದೇವಋಣ, ಋಷಿಋಣ, ಪಿತೃಋಣ ಮತ್ತು ಸಮಾಜಋಣವನ್ನು ತೀರಿಸುವುದು ಒಂದು ಮುಖ್ಯ ಉದ್ದೇಶವಾಗಿದೆ. ಇವುಗಳಲ್ಲಿ ಪಿತೃಋಣವನ್ನು ತೀರಿಸಲು ‘ಶ್ರಾದ್ಧ ಕರ್ಮವು ಆವಶ್ಯಕವಾಗಿದೆ. ತಂದೆ ತಾಯಿ ಮತ್ತು ಸಂಬಂಧಿಕರ ಮರಣೋತ್ತರ ಪ್ರಯಾಣವು ಸುಖಕರ ಮತ್ತು ಕ್ಲೇಶರಹಿತವಾಗಿ, ಅವರಿಗೆ ಸದ್ಗತಿಯು ಸಿಗಬೇಕೆಂದು ಮಾಡಬೇಕಾದ ಸಂಸ್ಕಾರಕ್ಕೆ ‘ಶ್ರಾದ್ಧ ಎನ್ನುತ್ತಾರೆ.