ಸಾಧಕರ ಮುಂದೆ ಭಾವದ ಆದರ್ಶವನ್ನಿಡುವ ಪರಾತ್ಪರ ಗುರು ಡಾ. ಆಠವಲೆ !
ಭಕ್ತನು ಭಗವಂತನೊಂದಿಗೆ ಏಕರೂಪವಾದ ನಂತರ ಬಿಂಬದ ಪ್ರತಿಬಿಂಬ ಮೂಡುತ್ತದೆ. ಭಕ್ತನ ಕಣ್ಣುಗಳಲ್ಲಿ ಭಾವಾಶ್ರು ಬಂದರೆ ಭಗವಂತನ ಕಣ್ಣುಗಳಿಂದ ಕೂಡ ಭಾವಾಶ್ರು ಬರುತ್ತವೆ. ಭಕ್ತನಿಗೆ ವೇದನೆಯಾದರೆ, ಭಗವಂತನಿಗೂ ವೇದನೆಯಾಗುತ್ತದೆ. ಭಕ್ತನು ಭಗವಂತನೊಂದಿಗೆ ಏಕರೂಪವಾಗಿದ್ದರೆ ಮಾತ್ರ ಈ ರೀತಿ ಘಟಿಸುತ್ತದೆ. ಅವನು ವಿಭಕ್ತನಾಗಿದ್ದರೆ, ಏನೂ ಘಟಿಸುವುದಿಲ್ಲ. ಭಗವಂತನು ನಿರ್ಗುಣ-ನಿರಾಕಾರನಿದ್ದಾನೆ.